ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 103ನೇ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ವೆಂಕಯ್ಯ ನಾಯ್ಡು 
ರಾಜ್ಯ

ದೌರ್ಜನ್ಯಕ್ಕೊಳಗಾದ ಜನರನ್ನು ಅಪ್ಪಿಕೊಳ್ಳಿ: ಧಾರ್ಮಿಕ ಮುಖಂಡರಿಗೆ ವೆಂಕಯ್ಯ ನಾಯ್ಡು ಕರೆ

ಧಾರ್ಮಿಕ ಮುಖಂಡರು ಹಳ್ಳಿಗಳಿಗೆ ಹೋಗಿ ದಲಿತರನ್ನು ಮತ್ತು ದೌರ್ಜನ್ಯಕ್ಕೆ ಒಳಗಾದ ಜನರನ್ನು ಅಪ್ಪಿಕೊಳ್ಳುವ ಮೂಲಕ...

ಮೈಸೂರು: ಧಾರ್ಮಿಕ ಮುಖಂಡರು ಹಳ್ಳಿಗಳಿಗೆ ಹೋಗಿ ದಲಿತರನ್ನು ಮತ್ತು ದೌರ್ಜನ್ಯಕ್ಕೆ ಒಳಗಾದ ಜನರನ್ನು ಅಪ್ಪಿಕೊಳ್ಳುವ ಮೂಲಕ ದೇಶದ ಅಭಿವೃದ್ಧಿಯಲ್ಲಿ ಅವರು ಸಹ ಸಮಾನ ಪಾಲುದಾರರು ಎಂಬ ಭಾವನೆ ಮೂಡಿಸಬೇಕು ಎಂದು ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರು ಮಂಗಳವಾರ ಕರೆ ನೀಡಿದ್ದಾರೆ.
ಇಂದು ಸುತ್ತೂರಿನಲ್ಲಿ  ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 103ನೇ ಜಯಂತಿ ಮಹೋತ್ಸವ ಹಾಗೂ ಶ್ರೀ ಚನ್ನವೀರ ದೇಶಿಕೇಂದ್ರ ಗುರುಕುಲ ಉದ್ಘಾಟನಾ ಸಮಾರಂಭವನ್ನು ನೆರವೇರಿಸಿ ಮಾತನಾಡಿದ ಉಪ ರಾಷ್ಟ್ರಪತಿ, ಧಾರ್ಮಿಕ ಮುಖಂಡರು ಈಗ ಹಳ್ಳಿಗಳಿಗೆ ಭೇಟಿ ನೀಡುವ ಸಮಯ ಬಂದಿದ್ದು, ಅವರು ದಲಿತರನ್ನು ಮತ್ತು ವಾಲ್ಮಿಕಿ ಸಮುದಾಯದ ಜನರನ್ನು ಅಪ್ಪಿಕೊಳ್ಳುವ ಮೂಲಕ ಅವರಿಗೆ ಸಾಂತ್ವನ ಮತ್ತು ಧೈರ್ಯ ತುಂಬಬೇಕು ಎಂದಿದ್ದಾರೆ.
ನಮ್ಮ ಸಂಸ್ಕೃತಿಗೂ ಮತ್ತು ಧರ್ಮಕ್ಕೂ ಸಂಬಂಧ ಇಲ್ಲ. 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣ ಹೇಳಿದಂತೆ ಸಂಸ್ಕೃತಿ ಕೇವಲ ಒಂದು ಜೀವನ ವಿಧಾನವಾಗಿದೆ ಎಂದರು.
ಯುವ ಜನತೆ ನಮ್ಮ ಮಾತೃ ಭೂಮಿಯನ್ನು ಪ್ರೀತಿಸಬೇಕು. ಸ್ಥಳೀಯ ಭಾಷೆಗಳು ಬೆಳೆಯಬೇಕು. ನಮ್ಮ ಮಾತೃ ಭಾಷೆ ಕಣ್ಣಿದ್ದಂತೆ. ಇತರ ಭಾಷೆ ಕನ್ನಡಕ ವಿದ್ದಂತೆ. ಕಣ್ಣು ಬಹಳ ಮುಖ್ಯವಾದುದ್ದು ಎಂದು ಉಪರಾಷ್ಟ್ರಪತಿಗಳು ಸಲಹೆ ನೀಡಿದರು. 
ಸಮಾರಂಭದಲ್ಲಿ  ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ ಗಳು, ಸುತ್ತೂರು ಮತ್ತು ಶ್ರೀಕ್ಷೇತ್ರ ಸಿದ್ಧಗಂಗಾದ  ಸಿದ್ಧಲಿಂಗ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು.  
ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿ  ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ಸಚಿವರಾದ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್‌, ಸಿ.ಎಸ್‌.ಪುಟ್ಟರಾಜು, ಡಾ.ಯತೀಂದ್ರ ಸಿದ್ದರಾಮಯ್ಯ ಮೊದಲಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT