ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು : ಚೂಡಿದಾರ್ ವಿಚಾರದಲ್ಲಿ ಜಗಳ : ಅಕ್ಕ- ತಂಗಿ ಆತ್ಮಹತ್ಯೆ

ಚೂಡಿದಾರ್ ಧರಿಸುವ ವಿಚಾರದಲ್ಲಿ ಜಗಳ ನಡೆದು ಅಕ್ಕ- ತಂಗಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಟಿ. ನರಸೀಪುರ ತಾಲೂಕಿನ ಕಾಲಬಸವನಹುಂಡಿ ಗ್ರಾಮದಲ್ಲಿ ನಡೆದಿದೆ.

ಮೈಸೂರು:ಚೂಡಿದಾರ್ ಧರಿಸುವ ವಿಚಾರದಲ್ಲಿ  ಜಗಳ ನಡೆದು ಅಕ್ಕ- ತಂಗಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಟಿ. ನರಸೀಪುರ ತಾಲೂಕಿನ ಕಾಲಬಸವನಹುಂಡಿ ಗ್ರಾಮದಲ್ಲಿ  ನಡೆದಿದೆ.

 10 ನೇ ತರಗತಿ ವಿದ್ಯಾರ್ಥಿನಿ ಅನು (16 )  ಹಾಗೂ ಆಕೆಯ ಚಿಕ್ಕಪ್ಪನ ಮಗಳು ಕವಿತಾ (30) ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು.

ಚೂಡಿದಾರ್ ಧರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಇವರಿಬ್ಬರ ನಡುವೆ ನಿನ್ನೆ ನಡುವೆ ಜಗಳ ನಡೆದಿದೆ. ನಂತರ ಹತಾಶೆಗೊಂಡ ಅನು ಮನೆಯ ಹಿಂಬಾಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಮನೆಯ ಕೊಠಡಿಯಲ್ಲಿ ಕವಿತಾ ತನ್ನ ವೇಲ್ ನಿಂದಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅನು ಆತ್ಮಹತ್ಯೆಯಿಂದ ಕಂಗಲಾದ  ಪೋಷಕರು ರೋಧಿಸುತ್ತಿರುವುದನ್ನು ನೋಡಿದ ಕವಿತಾ ಅಲ್ಲಿಂದ ಮನೆಯೊಳಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಲಕಾಡು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT