ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು : ಚೂಡಿದಾರ್ ವಿಚಾರದಲ್ಲಿ ಜಗಳ : ಅಕ್ಕ- ತಂಗಿ ಆತ್ಮಹತ್ಯೆ

ಚೂಡಿದಾರ್ ಧರಿಸುವ ವಿಚಾರದಲ್ಲಿ ಜಗಳ ನಡೆದು ಅಕ್ಕ- ತಂಗಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಟಿ. ನರಸೀಪುರ ತಾಲೂಕಿನ ಕಾಲಬಸವನಹುಂಡಿ ಗ್ರಾಮದಲ್ಲಿ ನಡೆದಿದೆ.

ಮೈಸೂರು:ಚೂಡಿದಾರ್ ಧರಿಸುವ ವಿಚಾರದಲ್ಲಿ  ಜಗಳ ನಡೆದು ಅಕ್ಕ- ತಂಗಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಟಿ. ನರಸೀಪುರ ತಾಲೂಕಿನ ಕಾಲಬಸವನಹುಂಡಿ ಗ್ರಾಮದಲ್ಲಿ  ನಡೆದಿದೆ.

 10 ನೇ ತರಗತಿ ವಿದ್ಯಾರ್ಥಿನಿ ಅನು (16 )  ಹಾಗೂ ಆಕೆಯ ಚಿಕ್ಕಪ್ಪನ ಮಗಳು ಕವಿತಾ (30) ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು.

ಚೂಡಿದಾರ್ ಧರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಇವರಿಬ್ಬರ ನಡುವೆ ನಿನ್ನೆ ನಡುವೆ ಜಗಳ ನಡೆದಿದೆ. ನಂತರ ಹತಾಶೆಗೊಂಡ ಅನು ಮನೆಯ ಹಿಂಬಾಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಮನೆಯ ಕೊಠಡಿಯಲ್ಲಿ ಕವಿತಾ ತನ್ನ ವೇಲ್ ನಿಂದಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅನು ಆತ್ಮಹತ್ಯೆಯಿಂದ ಕಂಗಲಾದ  ಪೋಷಕರು ರೋಧಿಸುತ್ತಿರುವುದನ್ನು ನೋಡಿದ ಕವಿತಾ ಅಲ್ಲಿಂದ ಮನೆಯೊಳಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಲಕಾಡು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT