ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿ: ಕಾಣೆಯಾಗಿದ್ದ ದಂಪತಿ ಜಮೀನಿನಲ್ಲಿ ಶವವಾಗಿ ಪತ್ತೆ!

ಚಿಂಚೋಳಿ ತಾಲೂಕಿನ ನಿಡಗುಂದ ಗ್ರಾಮದಿಂದ ನವೆಂಬರ್ 2 ರಿಂದ ಕಾಣಿಯಾಗಿದ್ದ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಜಮೀನಿನಲ್ಲಿ ದಂಪತಿಯನ್ನು ಬೆಂಕಿ ಹಚ್ಚಿ ಸುಡಲಾಗಿದೆ.

ಕಲಬುರಗಿ: ಚಿಂಚೋಳಿ ತಾಲೂಕಿನ ನಿಡಗುಂದ ಗ್ರಾಮದಿಂದ ನವೆಂಬರ್ 2 ರಿಂದ ಕಾಣಿಯಾಗಿದ್ದ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಜಮೀನಿನಲ್ಲಿ ದಂಪತಿಯನ್ನು  ಬೆಂಕಿ ಹಚ್ಚಿ ಸುಡಲಾಗಿದೆ.

ಅಜಯ್ ಕಾಳೆ (30)  ಜ್ಯೋತಿ (20) ಹತ್ಯೆಗೀಡಾದ ದಂಪತಿಗಳು. ಎರಡು ವರ್ಷಗಳ ಹಿಂದಷ್ಟೇ ಇವರ ವಿವಾಹವಾಗಿತ್ತು.

ಈ ದಂಪತಿ ನಾಪತ್ತೆಯಾದ ನಂತರ ಅಜಯ್ ತಾಯಿ,  ಜ್ಯೋತಿ ಸಹೋದರರ ವಿರುದ್ಧ ಅಪಹರಣ ಪ್ರಕರಣ ದಾಖಲಿಸಿದ್ದರು.

ಆದಾಗ್ಯೂ, ಸೂಳೇ ಪೇಟೆ ಪೊಲೀಸರು ಅಪಹರಣ ಪ್ರಕರಣ ದಾಖಲಿಸಿದ್ದರು. ಈ  ಮಧ್ಯೆ  ಪೋಷಕರು ಅಪಹರಣ ಪ್ರಕರಣ ದಾಖಲಿಸುತ್ತಿಲ್ಲ ಎಂದು ಆರೋಪಿಸಿ ಸೂಳೇ ಪೇಟೆ ಠಾಣೆಯ ಸಿಬ್ಬಂದಿ ವಿರುದ್ಧವೇ ಪ್ರಕರಣ ದಾಖಲಿಸಿದ್ದರು.

ಅಪರಿಚ ಮಹಿಳೆಯ ಹತ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಪೊಲೀಸರಿಗೆ ಜಮೀನಿನಲ್ಲಿ ದಂಪತಿಯ ಅಸ್ಥಿಪಂಜರ ಕಂಡುಬಂದಿದೆ. ನಂತರ ಇದು  ಅಜಯ್ ಹಾಗೂ ಜ್ಯೋತಿ ಅವರ ಮೃತದೇಹ ಎಂಬುದು ಸ್ಪಷ್ಟವಾಗಿದೆ.

ಅಜಯ್ ನಿಡಗುಂದಾದಕ್ಕೆ ಬರುವ ಮುಂಚೆ ಮಹಾರಾಷ್ಟ್ರದಲ್ಲಿ ಸಣ್ಣದಾದ ಅಂಗಡಿ ಇಟ್ಟುಕೊಂಡಿದ್ದ. ಅಲ್ಲಿ ದರೋಡೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಅಜಯ್  ನಿಡಗುಂದಾಕ್ಕೆ ಬಂದ ನಂತರವೂ ಕಳ್ಳತನ, ದರೋಡೆ ಕೃತ್ಯಗಳನ್ನು ಮುಂದುವರೆಸಿದ್ದ ಎಂಬುದಾಗಿ ಎಸ್ಪಿ ಶಶಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT