ಗೌರಿ ಲಂಕೇಶ್ 
ರಾಜ್ಯ

ಪವಿತ್ರ ಪುಸ್ತಕದ ಪ್ರೇರಣೆಯಿಂದ ಗೌರಿ ಲಂಕೇಶ್ ಹತ್ಯೆ: ಎಸ್ಐಟಿ ಹೇಳಿಕೆ ಅಪಹಾಸ್ಯ ಮಾಡಿದ ಸನಾತನ ಸಂಸ್ಥೆ

ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಹಿಂದೂ ಪರ ಸಂಘಟನೆಯೊಂದು....

ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಹಿಂದೂ ಪರ ಸಂಘಟನೆಯೊಂದು ಪ್ರಕಟಿಸುವ 'ಕ್ಷಾತ್ರಧರ್ಮ ಸಾಧನ' ಎಂಬ ಪವಿತ್ರ ಪುಸ್ತಕದಿಂದ ಪ್ರೇರಣೆ ಪಡೆದು ಪತ್ರಕರ್ತೆಯ ಹತ್ಯೆ ಮಾಡಲಾಗಿದೆ ಎಂದು ಹೇಳುತ್ತಿರುವುದಾಗಿ ಸನಾತನ ಸಂಸ್ಥೆ ಮಂಗಳವಾರ ವ್ಯಂಗ್ಯವಾಡಿದೆ.
ಇಂದು ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರ ಚೇತನ್ ರಾಜಹನ್ಸ್ ಅವರು, ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಹಿಂದೂ ಭಯೋತ್ಪಾದನೆಯನ್ನು ಬಿಂಬಿಸಲಾಗಿದೆ ಮತ್ತು ಮಾಲೆಗಾಂವ್ - 1 ಸಾಭೀತುಪಡಿಸುವಲ್ಲಿ ವಿಫಲವಾದ ನಂತರ ಈಗ ಮಾಲೆಗಾಂವ್ - 2 ಆರಂಭಿಸುವ ಸಂಚು ನಡೆದಿದೆ ಎಂದು ಆರೋಪಿಸಿದರು.
ಒಂದು ವೇಳೆ ಸಿಎಸ್ ಐಟಿ ಸನಾತನ ಸಂಸ್ಥೆಯ ಪವಿತ್ರ ಪುಸ್ತಕದ ಪ್ರೇರಣೆಯಿಂದಲೇ ಗೌರಿ ಲಂಕೇಶ್ ಹತ್ಯೆಯಾಗಿ ಎಂದು ಹೇಳುವುದಾದರೆ, ಲಕ್ಷಾಂತರ ಜನರನ್ನು ಹತ್ಯೆ ಮಾಡುತ್ತಿರುವ ಭಯೋತ್ಪಾದಕರಿಗೆ ಮತ್ತು ನಕ್ಸಲರಿಗೆ ಯಾವ ಪವಿತ್ರ ಪುಸ್ತಕ ಪ್ರೇರಣೆ ಎಂಬುದನ್ನು ಹೇಳಲಿ ಎಂದಿದ್ದಾರೆ.
ಇದೇ ವೇಳೆ ಎಸ್ ಐಟಿ ಬಂಧಿಸಿರುವ ಆರೋಪಿಗಳು ಸನಾತನ ಸಂಸ್ಥೆಯೊಂದಿಗೆ ಯಾವುದೇ ನಂಟು ಹೊಂದಿಲ್ಲ ಎಂದು ರಾಜಹನ್ಸ್ ಅವರು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT