ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ರೌಡಿ ಶೀಟರ್ ಮೇಲೆ ಪೊಲೀಸರಿಂದ ಗುಂಡಿನ ದಾಳಿ

ನವೆಂಬರ್ 30 ರಂದು ಕೊತ್ತನೂರಿನಲ್ಲಿ ಬಾರ್ ವೊಂದರಲ್ಲಿ ಲಾರಿ ಚಾಲಕನನ್ನು ಕೊಲೆ ಮಾಡಿದ್ದ ಆರೋಪಿ 19 ವರ್ಷದ ರೌಡಿ ಶೀಟರ್ ಮೇಲೆ ಹೆಣ್ಣೂರು ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಬೆಂಗಳೂರು: ನವೆಂಬರ್ 30 ರಂದು ಕೊತ್ತನೂರಿನಲ್ಲಿ ಬಾರ್ ವೊಂದರಲ್ಲಿ ಲಾರಿ ಚಾಲಕನನ್ನು ಕೊಲೆ ಮಾಡಿದ್ದ ಆರೋಪಿ 19 ವರ್ಷದ ರೌಡಿ ಶೀಟರ್ ಮೇಲೆ  ಹೆಣ್ಣೂರು ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.

ಗುಂಡೇಟಿನಿಂದ ಗಾಯಗೊಂಡಿರುವ ರೌಡಿ ಶೀಟರ್ ಅಭಿಷೇಕ್ ಹಾಗೂ ಕಾನ್ಸ್ ಟೇಬಲ್  ಸಂತೋಷ್ ಲಮಾಣಿ  ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊಲೆ, ದರೋಡೆ ಸೇರಿದಂತೆ ಸೇರಿದಂತೆ ಹಲವಾರು ಅಪರಾಧ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಅಭಿಷೇಕ್  ಈ ಹಿಂದೆ ಕೊತ್ತನೂರು ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಎನ್ನಲಾಗಿದೆ.

ವಡ್ಡರಪಾಳ್ಯ ನಿವಾಸಿಯಾದ ಅಭಿಷೇಕ್ ತನ್ನ ಸಹಚರರೊಂದಿಗೆ ಸೇರಿ  ಲಾರಿ ಚಾಲಕ ಕೇಶವ್ ಎಂಬವರನ್ನು ಹತ್ಯೆ ಮಾಡಿದ್ದರು.  ತಕ್ಷಣ ಆರೋಪಿಗಳನ್ನು ಬಂಧಿಸಲು ರಚಿಸಲಾಗಿದ್ದ ವಿಶೇಷ ತಂಡದಿಂದ  ಮೂವರನ್ನು ಬಂಧಿಸಲಾಗಿತ್ತು. ಅವರು ನೀಡಿದ ಮಾಹಿತಿ ಆಧಾರದ ಮೇಲೆ ಇನ್ಸ್ ಪೆಕ್ಟರ್ ಹೆಚ್ ಡಿ ಕುಲಕರ್ಣಿ ನೇತೃತ್ವದಲ್ಲಿನ ತಂಡ ರೌಡಿ ಶೀಟರ್ ನನ್ನು ಬೆನ್ನತಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT