ಸಿದ್ದಗಂಗಾ ಶ್ರೀಗಳು-ಡಾ ಜಿ ಪರಮೇಶ್ವರ್(ಸಂಗ್ರಹ ಚಿತ್ರ) 
ರಾಜ್ಯ

ಸಿದ್ಧಗಂಗಾ ಶ್ರೀಗಳು ಆರೋಗ್ಯವಾಗಿದ್ದಾರೆ, ಭಕ್ತರು ಆತಂಕಪಡುವ ಅಗತ್ಯವಿಲ್ಲ: ಡಾ ಜಿ ಪರಮೇಶ್ವರ್

ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಗುರುವಾರ ಬೆಳಗ್ಗೆ ಎಂದಿನಂತೆ ಮಠದ ಪೂಜಾ ...

ತುಮಕೂರು: ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಗುರುವಾರ ಬೆಳಗ್ಗೆ ಎಂದಿನಂತೆ ಮಠದ ಪೂಜಾ ಕೈಂಕರ್ಯದಲ್ಲಿ ತೊಡಗಿಕೊಂಡಿದ್ದು ಭಕ್ತಾಧಿಗಳು ಯಾವುದೇ ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ.

ಸಿದ್ದಗಂಗಾ ಶ್ರೀಗಳು ನಿನ್ನೆ ಆರೋಗ್ಯದಲ್ಲಿ ಕೊಂಚ ಏರುಪೇರು ಕಂಡುಬಂದು ವೈದ್ಯರು ಪರೀಕ್ಷೆ ನಡೆಸಿದ್ದರು. ಶ್ರೀಗಳಿಗೆ ಏನಾಯಿತು ಎಂದು ಭಕ್ತಾಧಿಗಳು ಆತಂಕಗೊಂಡಿದ್ದರು. ಆದರೆ ಇಂದು ಬೆಳಗ್ಗೆ ಎಂದಿನಂತೆ ಲವಲವಿಕೆಯಿಂದ ಇದ್ದಾರೆ. ನಾನು ಹೋಗಿ ಭೇಟಿ ಮಾಡಿದಾಗ ಎಂದಿನಂತೆ ಎಷ್ಟು ಹೊತ್ತಿಗೆ ಬಂದಿರಿ, ಬನ್ನಿ ಕುಳಿತುಕೊಳ್ಳಿ ಎಂದು ಆತ್ಮೀಯವಾಗಿ ಮಾತನಾಡಿಸಿದರು. ಅವರ ಶಿಷ್ಯನಲ್ಲಿ ತಮಗೆ ಎಷ್ಟಾಯಿತು ಎಂದು ಕೇಳಿದರು. ಅದಕ್ಕೆ 111 ಎಂದಾಗ ಬಹಳ ಆಯಿತು ಎಂದು ಹೇಳಿ ನಕ್ಕರು. ನಂತರ ಪ್ರಸಾದ ಸ್ವೀಕರಿಸಿ ಹೋಗಿ ಎಂದು ಶ್ರೀಗಳು ಹೇಳಿದರು ಎಂದು ಪರಮೇಶ್ವರ್ ಸುದ್ದಿಗಾರರಿಗೆ ತಿಳಿಸಿದರು.

ಶ್ರೀಗಳಿಗೆ ಇಂದು ಮತ್ತು ನಾಳೆ ವಿಶ್ರಾಂತಿಯ ಅಗತ್ಯವಿರುವುದರಿಂದ ಭಕ್ತಾದಿಗಳಿಗೆ ಸಾರ್ವಜನಿಕ ದರ್ಶನವಿರುವುದಿಲ್ಲ. ಚಿಕಿತ್ಸೆ ಅಗತ್ಯವಿದ್ದರೆ ಬೆಂಗಳೂರಿಗೆ ಅಥವಾ ಚೆನ್ನೈಗೆ ಕರೆದುಕೊಂಡು ಹೋಗುವ ಕುರಿತು ವೈದ್ಯರು ನಿರ್ಧರಿಸಲಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT