ಸಿದ್ದಗಂಗಾ ಶ್ರೀಗಳು-ಡಾ ಜಿ ಪರಮೇಶ್ವರ್(ಸಂಗ್ರಹ ಚಿತ್ರ) 
ರಾಜ್ಯ

ಸಿದ್ಧಗಂಗಾ ಶ್ರೀಗಳು ಆರೋಗ್ಯವಾಗಿದ್ದಾರೆ, ಭಕ್ತರು ಆತಂಕಪಡುವ ಅಗತ್ಯವಿಲ್ಲ: ಡಾ ಜಿ ಪರಮೇಶ್ವರ್

ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಗುರುವಾರ ಬೆಳಗ್ಗೆ ಎಂದಿನಂತೆ ಮಠದ ಪೂಜಾ ...

ತುಮಕೂರು: ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಗುರುವಾರ ಬೆಳಗ್ಗೆ ಎಂದಿನಂತೆ ಮಠದ ಪೂಜಾ ಕೈಂಕರ್ಯದಲ್ಲಿ ತೊಡಗಿಕೊಂಡಿದ್ದು ಭಕ್ತಾಧಿಗಳು ಯಾವುದೇ ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ.

ಸಿದ್ದಗಂಗಾ ಶ್ರೀಗಳು ನಿನ್ನೆ ಆರೋಗ್ಯದಲ್ಲಿ ಕೊಂಚ ಏರುಪೇರು ಕಂಡುಬಂದು ವೈದ್ಯರು ಪರೀಕ್ಷೆ ನಡೆಸಿದ್ದರು. ಶ್ರೀಗಳಿಗೆ ಏನಾಯಿತು ಎಂದು ಭಕ್ತಾಧಿಗಳು ಆತಂಕಗೊಂಡಿದ್ದರು. ಆದರೆ ಇಂದು ಬೆಳಗ್ಗೆ ಎಂದಿನಂತೆ ಲವಲವಿಕೆಯಿಂದ ಇದ್ದಾರೆ. ನಾನು ಹೋಗಿ ಭೇಟಿ ಮಾಡಿದಾಗ ಎಂದಿನಂತೆ ಎಷ್ಟು ಹೊತ್ತಿಗೆ ಬಂದಿರಿ, ಬನ್ನಿ ಕುಳಿತುಕೊಳ್ಳಿ ಎಂದು ಆತ್ಮೀಯವಾಗಿ ಮಾತನಾಡಿಸಿದರು. ಅವರ ಶಿಷ್ಯನಲ್ಲಿ ತಮಗೆ ಎಷ್ಟಾಯಿತು ಎಂದು ಕೇಳಿದರು. ಅದಕ್ಕೆ 111 ಎಂದಾಗ ಬಹಳ ಆಯಿತು ಎಂದು ಹೇಳಿ ನಕ್ಕರು. ನಂತರ ಪ್ರಸಾದ ಸ್ವೀಕರಿಸಿ ಹೋಗಿ ಎಂದು ಶ್ರೀಗಳು ಹೇಳಿದರು ಎಂದು ಪರಮೇಶ್ವರ್ ಸುದ್ದಿಗಾರರಿಗೆ ತಿಳಿಸಿದರು.

ಶ್ರೀಗಳಿಗೆ ಇಂದು ಮತ್ತು ನಾಳೆ ವಿಶ್ರಾಂತಿಯ ಅಗತ್ಯವಿರುವುದರಿಂದ ಭಕ್ತಾದಿಗಳಿಗೆ ಸಾರ್ವಜನಿಕ ದರ್ಶನವಿರುವುದಿಲ್ಲ. ಚಿಕಿತ್ಸೆ ಅಗತ್ಯವಿದ್ದರೆ ಬೆಂಗಳೂರಿಗೆ ಅಥವಾ ಚೆನ್ನೈಗೆ ಕರೆದುಕೊಂಡು ಹೋಗುವ ಕುರಿತು ವೈದ್ಯರು ನಿರ್ಧರಿಸಲಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT