ಸಿದ್ದಗಂಗಾ ಶ್ರೀಗಳು-ಡಾ ಜಿ ಪರಮೇಶ್ವರ್(ಸಂಗ್ರಹ ಚಿತ್ರ) 
ರಾಜ್ಯ

ಸಿದ್ಧಗಂಗಾ ಶ್ರೀಗಳು ಆರೋಗ್ಯವಾಗಿದ್ದಾರೆ, ಭಕ್ತರು ಆತಂಕಪಡುವ ಅಗತ್ಯವಿಲ್ಲ: ಡಾ ಜಿ ಪರಮೇಶ್ವರ್

ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಗುರುವಾರ ಬೆಳಗ್ಗೆ ಎಂದಿನಂತೆ ಮಠದ ಪೂಜಾ ...

ತುಮಕೂರು: ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಗುರುವಾರ ಬೆಳಗ್ಗೆ ಎಂದಿನಂತೆ ಮಠದ ಪೂಜಾ ಕೈಂಕರ್ಯದಲ್ಲಿ ತೊಡಗಿಕೊಂಡಿದ್ದು ಭಕ್ತಾಧಿಗಳು ಯಾವುದೇ ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ.

ಸಿದ್ದಗಂಗಾ ಶ್ರೀಗಳು ನಿನ್ನೆ ಆರೋಗ್ಯದಲ್ಲಿ ಕೊಂಚ ಏರುಪೇರು ಕಂಡುಬಂದು ವೈದ್ಯರು ಪರೀಕ್ಷೆ ನಡೆಸಿದ್ದರು. ಶ್ರೀಗಳಿಗೆ ಏನಾಯಿತು ಎಂದು ಭಕ್ತಾಧಿಗಳು ಆತಂಕಗೊಂಡಿದ್ದರು. ಆದರೆ ಇಂದು ಬೆಳಗ್ಗೆ ಎಂದಿನಂತೆ ಲವಲವಿಕೆಯಿಂದ ಇದ್ದಾರೆ. ನಾನು ಹೋಗಿ ಭೇಟಿ ಮಾಡಿದಾಗ ಎಂದಿನಂತೆ ಎಷ್ಟು ಹೊತ್ತಿಗೆ ಬಂದಿರಿ, ಬನ್ನಿ ಕುಳಿತುಕೊಳ್ಳಿ ಎಂದು ಆತ್ಮೀಯವಾಗಿ ಮಾತನಾಡಿಸಿದರು. ಅವರ ಶಿಷ್ಯನಲ್ಲಿ ತಮಗೆ ಎಷ್ಟಾಯಿತು ಎಂದು ಕೇಳಿದರು. ಅದಕ್ಕೆ 111 ಎಂದಾಗ ಬಹಳ ಆಯಿತು ಎಂದು ಹೇಳಿ ನಕ್ಕರು. ನಂತರ ಪ್ರಸಾದ ಸ್ವೀಕರಿಸಿ ಹೋಗಿ ಎಂದು ಶ್ರೀಗಳು ಹೇಳಿದರು ಎಂದು ಪರಮೇಶ್ವರ್ ಸುದ್ದಿಗಾರರಿಗೆ ತಿಳಿಸಿದರು.

ಶ್ರೀಗಳಿಗೆ ಇಂದು ಮತ್ತು ನಾಳೆ ವಿಶ್ರಾಂತಿಯ ಅಗತ್ಯವಿರುವುದರಿಂದ ಭಕ್ತಾದಿಗಳಿಗೆ ಸಾರ್ವಜನಿಕ ದರ್ಶನವಿರುವುದಿಲ್ಲ. ಚಿಕಿತ್ಸೆ ಅಗತ್ಯವಿದ್ದರೆ ಬೆಂಗಳೂರಿಗೆ ಅಥವಾ ಚೆನ್ನೈಗೆ ಕರೆದುಕೊಂಡು ಹೋಗುವ ಕುರಿತು ವೈದ್ಯರು ನಿರ್ಧರಿಸಲಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT