ಗ್ರಾಮದಲ್ಲಿನ ಸಾರ್ವಜನಿಕ ನೀರಿನ ಟ್ಯಾಂಕ್ 
ರಾಜ್ಯ

ಹಾಸನ: ಹೀರೇಕಡ್ಲೂರು ಗ್ರಾಮದಲ್ಲಿ ಜಾತಿ ಸಂಘರ್ಷ, ನಾಲ್ವರಿಗೆ ಗಾಯ

ಸಾರ್ವಜನಿಕ ನೀರಿನ ಟ್ಯಾಂಕ್ ನಿಂದ ನೀರು ತುಂಬಿಸಿಕೊಳ್ಳುವ ವಿಚಾರದಲ್ಲಿ ಮೇಲ್ಜಾತಿ ಮತ್ತು ದಲಿತರ ...

ಹಾಸನ: ಸಾರ್ವಜನಿಕ ನೀರಿನ ಟ್ಯಾಂಕ್ ನಿಂದ ನೀರು ತುಂಬಿಸಿಕೊಳ್ಳುವ ವಿಚಾರದಲ್ಲಿ ಮೇಲ್ಜಾತಿ ಮತ್ತು ದಲಿತರ ಮಧ್ಯೆ ಘರ್ಷಣೆ ನಡೆದ ಪ್ರಸಂಗ ಹಾಸನ ತಾಲ್ಲೂಕಿನ ಹೀರೇಕಡ್ಲೂರು ಗ್ರಾಮದಲ್ಲಿ ಕಳೆದ ಮಂಗಳವಾರ ರಾತ್ರಿ ನಡೆದಿದೆ.

ಕಳೆದ ಮಂಗಳವಾರ ರಾತ್ರಿ ದಲಿತರು ಗ್ರಾಮದ ಪ್ರದೀಪ್ ಎಂಬುವವನ ಮದುವೆ ಕಾರ್ಯಕ್ರಮಕ್ಕೆ ಮುನ್ನ ನೀರು ತುಂಬಿಕೊಳ್ಳಲೆಂದು ಬಂದಾಗ ಮೇಲ್ಜಾತಿಯ ಗುಂಪೊಂದು ನೀರು ತುಂಬಿಕೊಳ್ಳುವುದನ್ನು ತಡೆಯುತ್ತದೆ. ಈ ಸಂದರ್ಭದಲ್ಲಿ ಜಗಳ ಆರಂಭವಾಗಿದೆ. ಇದರಿಂದ ಸಿಟ್ಟಿಗೆದ್ದ ದಲಿತ ಯುವಕರು ಮೇಲ್ಜಾತಿಯವರ ಮೇಲೆ ದಾಳಿ ನಡೆಸಲು ಪ್ರಾರಂಭಿಸಿದರು. ಗಲಭೆಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರಿಗೆ ಗಾಯಗಳಾಗಿವೆ.

ಈ ಮಧ್ಯೆ, ದಲಿತ ಸಂಘರ್ಷ ಸಮಿತಿ ನಾಯಕ ಸತೀಶ್, ಮೇಲ್ಜಾತಿಯವರು ದಲಿತ ಕುಟುಂಬಗಳಿಗೆ ಅಕ್ಕಿ, ಧಾನ್ಯಗಳನ್ನು ಮಾರಾಟ ಮಾಡದಂತೆ ತಡೆಯುತ್ತಾರೆ. ಸರಿಯಾಗಿ ಬದುಕಲು ಬಿಡುತ್ತಿಲ್ಲ. ಪೊಲೀಸರು ಮಧ್ಯೆ ಪ್ರವೇಶಿಸಿ ಶಾಂತಿ ಸಮಿತಿ ಸಭೆ ನಡೆಸಿ ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದು ಕೋರಿದರು. ಜಿಲ್ಲಾಡಳಿತ ಕೂಡ ಗ್ರಾಮದಲ್ಲಿ ಶಾಂತಿ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT