ಸಂಗ್ರಹ ಚಿತ್ರ 
ರಾಜ್ಯ

ಮಂಡ್ಯ: ಪೆಂಟಾ ಚುಚ್ಚುಮದ್ದಿಗೆ 2 ತಿಂಗಳ ಹಸುಗೂಸು ಸಾವು

ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೆಂಟಾವೇಲೆಂಟ್ ಚುಚ್ಚುಮದ್ದು ಹಾಕಿಸಿಕೊಂಡಿದ್ದ 2 ತಿಂಗಳ ಹಸುಕಂದಮ್ಮ ಮೃತಪಟ್ಟಿರುವ ಘಟನೆ ಮದ್ದೂರು ತಾಲೂಕಿನ ಕಾಡುಕೊತ್ತನಹಳ್ಳಿಯಲ್ಲಿ ನಡೆದಿದೆ.

ಮಂಡ್ಯ: ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೆಂಟಾವೇಲೆಂಟ್ ಚುಚ್ಚುಮದ್ದು ಹಾಕಿಸಿಕೊಂಡಿದ್ದ 2 ತಿಂಗಳ ಹಸುಕಂದಮ್ಮ ಮೃತಪಟ್ಟಿರುವ ಘಟನೆ ಮದ್ದೂರು ತಾಲೂಕಿನ ಕಾಡುಕೊತ್ತನಹಳ್ಳಿಯಲ್ಲಿ ನಡೆದಿದೆ. 
ಜ್ಯೋತಿ ಹಾಗೂ ಸ್ವಾಮಿ ದಂಪತಿ ತಮ್ಮ ಎರಡು ತಿಂಗಳ ಮಗುವಿಗೆ ಚುಚ್ಚುಮದ್ದು ಹಾಕಿಸಿದ ಕೆಲವೇ ಗಂಟೆಗಳಲ್ಲಿ ಮಗು ಮೃತಪಟ್ಟಿದೆ. ಕಳೆದ 8 ತಿಂಗಳ ಅವಧಿಯಲ್ಲಿ ಮಂಡ್ಯದಲ್ಲಿ ಸಂಭವಿಸಿದ 2ನೇ ಪ್ರಕರಣ ಇದಾಗಿದೆ. 
ಜ್ಯೋತಿ ಮಗುವಿಗೆ ಪೆಂಟಾ ಚುಚ್ಚುಮದ್ದು ಹಾಕಿಸಲು ಗುರುವಾರ ಆರೋಗ್ಯ ಕೇಂದ್ರಕ್ಕೆ ಕರೆ ತಂದಿದ್ದರು. ವೈದ್ಯೆ ಮಂಜುಳಾ ಬೆಳಗ್ಗೆ ಮಗುವಿಗೆ ಚುಚ್ಚುಮದ್ದು ನೀಡಿದ್ದರು. ನಂತರ ಮಗು ಅಳಲು ಆರಂಭಿಸಿದೆ. ಮಧ್ಯರಾತ್ರಿ 12ಗಂಟೆ ಸಮಯಕ್ಕೆ ಸಣ್ಣದಾಗಿ ಮಗುವಿಗೆ ಜ್ವರ ಕಾಣಿಸಿಕೊಂಡಿದ್ದು, ಇದರಿಂದ ಆತಂಕಗೊಂಡ ಪೋಷಕರು ಶುಕ್ರವಾರ ಬೆಳಿಗ್ಗೆ 9ಕ್ಕೆ ಪ್ರಾತಮಿಕ ಆರೋಗ್ಯ ಕೇಂದ್ರಕ್ಕೆ ಮಗುವನ್ನು ಕರೆತಂದಿದ್ದಾರೆ. 
ವೈದ್ಯರಿಕೆ ಕರೆ ಮಾಡಿ ವಿಷಯ ತಿಳಿಸಿದಾಗ ಹೆಚ್ಚಿನ ಚಿಕಿತ್ಸೆಗೆ ಕೆ.ಎಂ.ದೊಡ್ಡಿ ಆಸ್ಪತ್ರೆಗೆ ಕರೆದೊಯ್ಯುವಂತೆ ತಿಳಿಸಿದ್ದಾರೆ. ಆದರೆ, ಆ ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗದ ಮಧ್ಯೆಯೇ ಮಗು ಮೃತಪಟ್ಟಿದೆ. ಮಗುವನ್ನು ಆಸ್ಪತ್ರೆಗೆ ಕರೆತಂದ ವೇಳೆ ಆಸ್ಪತ್ರೆಯ ಸಿಬ್ಬಂದಿಯೂ ಸಮರ್ಪಕವಾಗಿ ಚಿಕಿತ್ಸೆ ನೀಡಲಿಲ್ಲ. ಆಸ್ಪತ್ರೆ ಸಿಬ್ಬಂದಿ ಹಾಗೂ ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಮೃತಪಟ್ಟಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT