ಸಾಲದ ಮುಕ್ತ ಪ್ರಮಾಣಪತ್ರ ಹೊಂದಿರುವ ರೈತರು 
ರಾಜ್ಯ

ರೈತ ಸಾಲಮನ್ನಾ ಯೋಜನೆಗೆ ಅಧಿಕೃತ ಚಾಲನೆ: 2 ತಾಲ್ಲೂಕಿನ 477 ರೈತರಿಗೆ ಸಾಲ ಮುಕ್ತ ಪ್ರಮಾಣಪತ್ರ ಹಸ್ತಾಂತರ

ರಾಜ್ಯ ಸರ್ಕಾರ ರೈತರ ಸಾಲಮನ್ನಾ ಯೋಜನೆಯಡಿ 49 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಲು ಯೋಜನೆ ತಯಾರಿಸಿದ್ದು ಇದರ ಪ್ರಾರಂಭಿಕ ಹಂತವಾಗಿ ಶನಿವಾರ 477 ರೈತರಿಗೆ....

ಬೆಂಗಳೂರು: ರಾಜ್ಯ ಸರ್ಕಾರ ರೈತರ ಸಾಲಮನ್ನಾ ಯೋಜನೆಯಡಿ  49 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಲು ಯೋಜನೆ ತಯಾರಿಸಿದ್ದು ಇದರ ಪ್ರಾರಂಭಿಕ ಹಂತವಾಗಿ ಶನಿವಾರ 477 ರೈತರಿಗೆ ಸಾಲ ಮುಕ್ತ ಪ್ರಮಾಣಪತ್ರಗಳನ್ನು ಹಸ್ತಾಂತರಿಸಲಾಗಿದೆ.
ಸಾಲಮನ್ನಾ ಯೋಜನೆ ಜಾರಿ ವಿಳಂಬವಾಗಿದ್ದ ಕಾರಣ ರೈತರು ಹಾಗೂ ವಿರೋಧ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ನಿನ್ನೆ ದೊಡ್ಡಬಳ್ಳಾಪುರದ 100 ರೈತರಿಗೆ ಸಾಲ ಮುಕ್ತ ಪ್ರಮಾಣಪತ್ರ ನೀಡಿದ್ದಾರೆ. ಇದೇ ವೇಳೆ ಸಮ್ಮಿಶ್ರ ಸರ್ಕಾರದ ಸಹಕಾರಿ ಸಚಿವರಾದ ಬಂಡೆಪ್ಪ ಕಾಶಂಪೂರಕಲಬುರಗಿ ಜಿಲ್ಲೆಯ ಸೇಡಂ ನ 377 ರೈತರಿಗೆ ಪ್ರಮಾಣಪತ್ರಗಳನ್ನು ಹಸ್ತಾಂತರಿಸಿದರು
"ನಿರಂತರ ಸಾಲಬಾಧೆಯಿಂದ ಬಳಲುತ್ತಿರುವ ರೈತರ ನೆರವಿಗಾಗಿ ಸಾಲಮನ್ನಾ ಯೋಜನೆ ತಯಾರಿಸಲಾಗಿದೆ.ಇದೀಗ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗುತ್ತಿದ್ದು  ರೈತರಲ್ಲಿ ಗೊಂದಲವನ್ನು ಸೃಷ್ಟಿಸಲು ಪ್ರಯತ್ನಿಸುವವರಿಗೆ ಉತ್ತರ ನೀಡಿದ್ದೇನೆ" ಯೋಜನೆ ಕಾರ್ಯರೂಪಕ್ಕೆ ತರುವಲ್ಲಿ ಸರ್ಕಾರದ ಬದ್ದತೆಯನ್ನು ಪ್ರಶ್ನಿಸಿದ ಪ್ರತಿಪಕ್ಷಗಳಿಗೆ ಕುಮಾರಸ್ವಾಮಿ ಉತ್ತರಿಸಿದ್ದಾರೆ.
ರಾಜ್ಯ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಸಾಲ ಮನ್ನಾ ಯೋಜನೆ ಜಾರಿ ವಿಳಂಬದ ಕುರಿತು ಸರ್ಕಾರವನ್ನು ತಿವಿಯಲು ಬಿಜೆಪಿ ಯೋಜಿಸಿತ್ತು.
ರಾಜ್ಯಾದ್ಯಂತ ಯೋಜನೆ ಜಾರಿಯ ಕುರಿತು ಮಾತನಾಡಿದ ಕುಮಾರಸ್ವಾಮಿ ರಾಷ್ಟ್ರೀಕೃತ ಬ್ಯಾಂಕುಗಳು, ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.10 ಸುತ್ತುಗಳ ಸಭೆ ನಡೆಸಿದ ಹೊರತಾಗಿಯೂ, ರಾಷ್ಟ್ರೀಕೃತ ಬ್ಯಾಂಕುಗಳು ರಾಜ್ಯ ಸರ್ಕಾರಕ್ಕೆ ಸಹಕಾರ ನೀಡುತ್ತಿಲ್ಲ. ನಮ್ಮ ಮನವಿಗೆ ಕೇಂದ್ರ ಸರ್ಕಾರ ಸಹ ಪ್ರತಿಸ್ಪಂದಿಸುತ್ತಿಲ್ಲ." ಅವರು ಹೇಳಿದ್ದಾರೆ.
ಶನಿವಾರ ಸಾಲಮುಕ್ತ ಪ್ರಮಾಣಪತ್ರ ಸ್ವೀಕರಿಸಿದ 477 ರೈತರು ಸಹಕಾರಿ ಸಂಘ ಹಾಗೂ ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಾಲ ಪಡೆದವರಾಗಿದ್ದಾರೆ. ನವೆಂಬರ್ ನಲ್ಲಿ ಸೇಡಂ ಹಾಗೂ ದೊಡ್ಡಬಳ್ಳಾಪುರದಲ್ಲಿ ಸಾಲ ಮನ್ನಾ ಯೊಜನೆ ಜಾರಿಯಾಗಿತ್ತು.ಶನಿವಾರ ರೈತರಿಗೆ ನೀಡಲಾದ ಪ್ರಮಾಣಪತ್ರಗಳಿಗೆ ಆಯಾ ಬ್ಯಾಂಕುಗಳ ವ್ಯವಸ್ಥಾಪಕರು ಸಹಿ ಮಾಡಿದ್ದಾರೆ.ಇದರೊಡನೆ ರೈತರು ಹೊಸ ಸಾಲಕ್ಕೆ ಅರ್ಹರಾಗುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT