ರಾಮಚಂದ್ರ ಗುಹಾ 
ರಾಜ್ಯ

ಗೋಮಾಂಸ ಸೇವನೆ ಕುರಿತು ಟ್ವೀಟ್: ಖ್ಯಾತ ಅಂಕಣಕಾರ ರಾಮಚಂದ್ರ ಗುಹಾಗೆ ಬೆದರಿಕೆ ಕರೆ

ಗೋಮಾಂಸ ಸೇವನೆ ಕುರಿತು ಟ್ವೀಟ್ ಮಾಡಿ ವಿವಾದಕ್ಕೆ ಸಿಲುಕಿಕೊಂಡಿದ್ದ ಖ್ಯಾತ ಅಂಕಣಕಾರ ಹಾಗೂ ಇತಿಹಾಸ ತಜ್ಞ ರಾಮಚಂದ್ರ ಗುಹಾ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ಕರೆ ಮಾಡಿದ್ದಾರೆಂದು ತಿಳಿದುಬಂದಿದೆ...

ಬೆಂಗಳೂರು: ಗೋಮಾಂಸ ಸೇವನೆ ಕುರಿತು ಟ್ವೀಟ್ ಮಾಡಿ ವಿವಾದಕ್ಕೆ ಸಿಲುಕಿಕೊಂಡಿದ್ದ ಖ್ಯಾತ ಅಂಕಣಕಾರ ಹಾಗೂ ಇತಿಹಾಸ ತಜ್ಞ ರಾಮಚಂದ್ರ ಗುಹಾ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ಕರೆ ಮಾಡಿದ್ದಾರೆಂದು ತಿಳಿದುಬಂದಿದೆ. 
ಇತ್ತೀಚೆಗೆ ರಾಮಚಂದ್ರ ಗುಹಾ ಅವರು ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಟ್ವೀಟ್ ವೊಂದನ್ನು ಮಾಡಿದ್ದರು. ಈ ಟ್ವೀಟ್ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. 
ಬಿಜೆಪಿ ಸರ್ಕಾರವಿರುವ ಗೋವಾ ರಾಜ್ಯದಲ್ಲಿ ಗೋಮಾಂಸ ತಿಂದು ಸಂಭ್ರಮಿಸುತ್ತಿದ್ದೇನೆಂದು ಟ್ವೀಟ್ ಮಾಡಿದ್ದರು. ಇದಕ್ಕೆ ಟ್ವಿಟರ್ ನಲ್ಲಿ ಹಲವರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಬಳಿಕ ಗುಹಾ ಅವರು ಟ್ವೀಟನ್ನು ಡಿಲೀಟ್ ಮಾಡಿದ್ದರು. ಇದರ ಬೆನ್ನಲ್ಲೇ ಅಪರಿಚ ವ್ಯಕ್ತಿಯೊಬ್ಬ ಗುಹಾ ಅವರಿಗೆ ಬೆದರಿಕೆ ಕರೆ ಮಾಡಿದ್ದಾನೆಂದು ವರದಿಗಳು ತಿಳಿಸಿವೆ. 
ಬೆದರಿಕೆ ಕರೆ ಬಂದಿರುವ ಕುರಿತಂತೆ ಸ್ವತಃ ರಾಮಚಂದ್ರ ಗುಹಾ ಅವರೇ ಟ್ವೀಟ್ ಮಾಡಿದ್ದು, ದೆಹಲಿ ಮೂಲದ ವ್ಯಕ್ತಿಯಾಗಿರುವ ಸಂಜಯ್ ಎಂಬಾತ ನನಗೆ ಬೆದರಿಕೆ ಕರೆ ಮಾಡಿದ್ದು, +91-98351-38678 ಸಂಖ್ಯೆಯಿಂದ ನನಗೆ ಬೆದರಿಕೆ ಕರೆ ಬಂದಿದೆ. ಕೇವಲ ನನಗಷ್ಟೇ ಅಲ್ಲದೆ, ನನ್ನ ಪತ್ನಿಗೂ ಬೆದರಿಕೆ ಹಾಕಿದ್ದಾನೆಂದು ಹೇಳಿದ್ದಾರೆ. 
ಮಾಹಿತಿ ತಿಳಿದ ಕೂಡಲೇ ಹಲಸೂರು ಪೊಲೀಸ್ ಠಾಣೆಯ ಇನ್ಸ್'ಪೆಕ್ಟರ್ ರಾಮಚಂದ್ರಾ ಗುಹಾ ಅವರನ್ನು ಸಂಪರ್ಕಿಸಿದ್ದಾರೆ. 
ಪ್ರಕರಣ ಸಂಬಂಧ ಗುಹಾ ಅವರು ಲಿಖಿತವಾಗಿ ಯಾವುದೇ ದೂರು ನೀಡಿಲ್ಲ. ಹಲಸೂರಿನ ಅವರ ಮನೆಯಲ್ಲಿ ಪತ್ನಿ ಹಾಗೂ ಮಕ್ಕಳಿದ್ದು, ಬೀಟ್ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT