ರಾಮಚಂದ್ರ ಗುಹಾ 
ರಾಜ್ಯ

ಗೋಮಾಂಸ ಸೇವನೆ ಕುರಿತು ಟ್ವೀಟ್: ಖ್ಯಾತ ಅಂಕಣಕಾರ ರಾಮಚಂದ್ರ ಗುಹಾಗೆ ಬೆದರಿಕೆ ಕರೆ

ಗೋಮಾಂಸ ಸೇವನೆ ಕುರಿತು ಟ್ವೀಟ್ ಮಾಡಿ ವಿವಾದಕ್ಕೆ ಸಿಲುಕಿಕೊಂಡಿದ್ದ ಖ್ಯಾತ ಅಂಕಣಕಾರ ಹಾಗೂ ಇತಿಹಾಸ ತಜ್ಞ ರಾಮಚಂದ್ರ ಗುಹಾ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ಕರೆ ಮಾಡಿದ್ದಾರೆಂದು ತಿಳಿದುಬಂದಿದೆ...

ಬೆಂಗಳೂರು: ಗೋಮಾಂಸ ಸೇವನೆ ಕುರಿತು ಟ್ವೀಟ್ ಮಾಡಿ ವಿವಾದಕ್ಕೆ ಸಿಲುಕಿಕೊಂಡಿದ್ದ ಖ್ಯಾತ ಅಂಕಣಕಾರ ಹಾಗೂ ಇತಿಹಾಸ ತಜ್ಞ ರಾಮಚಂದ್ರ ಗುಹಾ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ಕರೆ ಮಾಡಿದ್ದಾರೆಂದು ತಿಳಿದುಬಂದಿದೆ. 
ಇತ್ತೀಚೆಗೆ ರಾಮಚಂದ್ರ ಗುಹಾ ಅವರು ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಟ್ವೀಟ್ ವೊಂದನ್ನು ಮಾಡಿದ್ದರು. ಈ ಟ್ವೀಟ್ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. 
ಬಿಜೆಪಿ ಸರ್ಕಾರವಿರುವ ಗೋವಾ ರಾಜ್ಯದಲ್ಲಿ ಗೋಮಾಂಸ ತಿಂದು ಸಂಭ್ರಮಿಸುತ್ತಿದ್ದೇನೆಂದು ಟ್ವೀಟ್ ಮಾಡಿದ್ದರು. ಇದಕ್ಕೆ ಟ್ವಿಟರ್ ನಲ್ಲಿ ಹಲವರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಬಳಿಕ ಗುಹಾ ಅವರು ಟ್ವೀಟನ್ನು ಡಿಲೀಟ್ ಮಾಡಿದ್ದರು. ಇದರ ಬೆನ್ನಲ್ಲೇ ಅಪರಿಚ ವ್ಯಕ್ತಿಯೊಬ್ಬ ಗುಹಾ ಅವರಿಗೆ ಬೆದರಿಕೆ ಕರೆ ಮಾಡಿದ್ದಾನೆಂದು ವರದಿಗಳು ತಿಳಿಸಿವೆ. 
ಬೆದರಿಕೆ ಕರೆ ಬಂದಿರುವ ಕುರಿತಂತೆ ಸ್ವತಃ ರಾಮಚಂದ್ರ ಗುಹಾ ಅವರೇ ಟ್ವೀಟ್ ಮಾಡಿದ್ದು, ದೆಹಲಿ ಮೂಲದ ವ್ಯಕ್ತಿಯಾಗಿರುವ ಸಂಜಯ್ ಎಂಬಾತ ನನಗೆ ಬೆದರಿಕೆ ಕರೆ ಮಾಡಿದ್ದು, +91-98351-38678 ಸಂಖ್ಯೆಯಿಂದ ನನಗೆ ಬೆದರಿಕೆ ಕರೆ ಬಂದಿದೆ. ಕೇವಲ ನನಗಷ್ಟೇ ಅಲ್ಲದೆ, ನನ್ನ ಪತ್ನಿಗೂ ಬೆದರಿಕೆ ಹಾಕಿದ್ದಾನೆಂದು ಹೇಳಿದ್ದಾರೆ. 
ಮಾಹಿತಿ ತಿಳಿದ ಕೂಡಲೇ ಹಲಸೂರು ಪೊಲೀಸ್ ಠಾಣೆಯ ಇನ್ಸ್'ಪೆಕ್ಟರ್ ರಾಮಚಂದ್ರಾ ಗುಹಾ ಅವರನ್ನು ಸಂಪರ್ಕಿಸಿದ್ದಾರೆ. 
ಪ್ರಕರಣ ಸಂಬಂಧ ಗುಹಾ ಅವರು ಲಿಖಿತವಾಗಿ ಯಾವುದೇ ದೂರು ನೀಡಿಲ್ಲ. ಹಲಸೂರಿನ ಅವರ ಮನೆಯಲ್ಲಿ ಪತ್ನಿ ಹಾಗೂ ಮಕ್ಕಳಿದ್ದು, ಬೀಟ್ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT