ಸಂಗ್ರಹ ಚಿತ್ರ 
ರಾಜ್ಯ

ರೈಲು ಡಿಕ್ಕಿ: ಆನೆ ಸಾವು, 6 ತಿಂಗಳಲ್ಲಿ ಸಕಲೇಶಪುರದಲ್ಲಿ 3 ಆನೆ ರೈಲಿಗೆ ಬಲಿ

ರೈಲು ಡಿಕ್ಕಿ ಹೊಡೆದ ಪರಿಣಾಮ 20 ವರ್ಷದ ಒಂಟಿ ಸಲಗವೊಂದು ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಕಾಕನಮನೆ ಬಳಿ ಸೋಮವಾರ ಮುಂಜಾನೆ ನಡೆದಿದೆ...

ಸಕಲೇಪುರ: ರೈಲು ಡಿಕ್ಕಿ ಹೊಡೆದ ಪರಿಣಾಮ 20 ವರ್ಷದ ಒಂಟಿ ಸಲಗವೊಂದು ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಕಾಕನಮನೆ ಬಳಿ ಸೋಮವಾರ ಮುಂಜಾನೆ ನಡೆದಿದೆ. 
ಇದರೊಂದಿಗೆ ಕಳೆದ 6 ತಿಂಗಳ ಅವಧಿಯಲ್ಲಿ ರೈಲಿಗೆ ಸಿಲುಕಿ ಒಟ್ಟು 3 ಆನೆಗಳು ಮೃತಪಟ್ಟಂತಾಗಿದೆ. 
ಕಾಕನಮನೆ ಬಳಿಯ 800/30 ಮೈಲಿಗಲ್ಲಿನ ಬಳಿ ಈ ದುರ್ಘಟನೆ ನಡೆದಿದೆ. ಆನೆ ಹಳಿ ದಾಟುವ ಸಂದರ್ಭದಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರವಾರ-ಬೆಂಗಳೂರು ಪ್ಯಾಸೆಂಜರಪ್ ರೈಲು ಡಿಕ್ಕಿ ಹೊಡೆದು ಆನೆ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. 
ಆಹಾರ ಹುಡುಕಿಕೊಂಡಿ ಬೇಲೂರು ಅಥವಾ ಚಿಕ್ಕಮಗಳೂರು ಕಡೆಯಿಂದ ಆನೆ ಈ ಭಾಗಕ್ಕೆ ಬಂದಿರಬಹುದು. ರೈಲು ಡಿಕ್ಕೆ ಹೊಡೆದ ರಭಸಕ್ಕೆ ಆನೆ ಗಂಭೀರವಾಗಿ ಗಾಯಗೊಂಡಿದ್ದು, ಕೆಲ ಹೊತ್ತಿನಲ್ಲಿಯೇ ರೈಲ್ವೇ ಹಳಿ ಪಕ್ಕವೇ ಕೊನೆಯುಸಿರೆಳೆದಿದೆ ಎಂದು ತಿಳಿಸಿದ್ದಾರೆ. 
ಸಲಗದ ಮರಣೋತ್ತರ ಪರೀಕ್ಷೆಯನ್ನು ಸ್ಥಳದಲ್ಲಿಯೇ ನಡೆಸಿ ಅಲ್ಲೇ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಇದೇ ಜೂ.3 ರಂದು ಸಕಲೇಶಪುರ ತಾಲೂಕು ಯಡಕುಮರಿ ಬಳಿ ರೈಲಿಗೆ ಸಿಲುಗಿ 2 ಮರಿಯಾನೆಗಳು ಬಲಿಯಾಗಿದ್ದವು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

9 ವರ್ಷಗಳ ಬಳಿಕ ಇಸ್ರೇಲ್ ಗೆ ಪ್ರಧಾನಿ ಮೋದಿ ಭೇಟಿ; ಅದ್ದೂರಿ ರೆಡ್ ಕಾರ್ಪೆಟ್ ಸ್ವಾಗತ

India to Israel: ಪ್ರಧಾನಿ ಮೋದಿ ಪಯಣಿಸಿದ್ದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ: ಮಕ್ಕಳ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲು

ವಿರೋಶ್ ಮದುವೆ: ಹಳದಿ ಶಾಸ್ತ್ರ ಆರಂಭ; ಫೋಟೋ ಹಂಚಿಕೊಂಡ ವಿಜಯ್ ದೇವರಕೊಂಡ, ಆಶಿಕಾ

ಪಾಕಿಸ್ತಾನದ ಮುಸ್ಲಿಮ್ ಉಮ್ಮಾ ಗೆ ಕಾಡ್ತಿದೆ ಇಸ್ರೇಲ್- ಭಾರತದ Hexagon Alliance ಗುಮ್ಮಾ!

SCROLL FOR NEXT