ಸಂಗ್ರಹ ಚಿತ್ರ 
ರಾಜ್ಯ

ರೈಲು ಡಿಕ್ಕಿ: ಆನೆ ಸಾವು, 6 ತಿಂಗಳಲ್ಲಿ ಸಕಲೇಶಪುರದಲ್ಲಿ 3 ಆನೆ ರೈಲಿಗೆ ಬಲಿ

ರೈಲು ಡಿಕ್ಕಿ ಹೊಡೆದ ಪರಿಣಾಮ 20 ವರ್ಷದ ಒಂಟಿ ಸಲಗವೊಂದು ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಕಾಕನಮನೆ ಬಳಿ ಸೋಮವಾರ ಮುಂಜಾನೆ ನಡೆದಿದೆ...

ಸಕಲೇಪುರ: ರೈಲು ಡಿಕ್ಕಿ ಹೊಡೆದ ಪರಿಣಾಮ 20 ವರ್ಷದ ಒಂಟಿ ಸಲಗವೊಂದು ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಕಾಕನಮನೆ ಬಳಿ ಸೋಮವಾರ ಮುಂಜಾನೆ ನಡೆದಿದೆ. 
ಇದರೊಂದಿಗೆ ಕಳೆದ 6 ತಿಂಗಳ ಅವಧಿಯಲ್ಲಿ ರೈಲಿಗೆ ಸಿಲುಕಿ ಒಟ್ಟು 3 ಆನೆಗಳು ಮೃತಪಟ್ಟಂತಾಗಿದೆ. 
ಕಾಕನಮನೆ ಬಳಿಯ 800/30 ಮೈಲಿಗಲ್ಲಿನ ಬಳಿ ಈ ದುರ್ಘಟನೆ ನಡೆದಿದೆ. ಆನೆ ಹಳಿ ದಾಟುವ ಸಂದರ್ಭದಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರವಾರ-ಬೆಂಗಳೂರು ಪ್ಯಾಸೆಂಜರಪ್ ರೈಲು ಡಿಕ್ಕಿ ಹೊಡೆದು ಆನೆ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. 
ಆಹಾರ ಹುಡುಕಿಕೊಂಡಿ ಬೇಲೂರು ಅಥವಾ ಚಿಕ್ಕಮಗಳೂರು ಕಡೆಯಿಂದ ಆನೆ ಈ ಭಾಗಕ್ಕೆ ಬಂದಿರಬಹುದು. ರೈಲು ಡಿಕ್ಕೆ ಹೊಡೆದ ರಭಸಕ್ಕೆ ಆನೆ ಗಂಭೀರವಾಗಿ ಗಾಯಗೊಂಡಿದ್ದು, ಕೆಲ ಹೊತ್ತಿನಲ್ಲಿಯೇ ರೈಲ್ವೇ ಹಳಿ ಪಕ್ಕವೇ ಕೊನೆಯುಸಿರೆಳೆದಿದೆ ಎಂದು ತಿಳಿಸಿದ್ದಾರೆ. 
ಸಲಗದ ಮರಣೋತ್ತರ ಪರೀಕ್ಷೆಯನ್ನು ಸ್ಥಳದಲ್ಲಿಯೇ ನಡೆಸಿ ಅಲ್ಲೇ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಇದೇ ಜೂ.3 ರಂದು ಸಕಲೇಶಪುರ ತಾಲೂಕು ಯಡಕುಮರಿ ಬಳಿ ರೈಲಿಗೆ ಸಿಲುಗಿ 2 ಮರಿಯಾನೆಗಳು ಬಲಿಯಾಗಿದ್ದವು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!