ಸಂಗ್ರಹ ಚಿತ್ರ 
ರಾಜ್ಯ

ರೈಲು ಡಿಕ್ಕಿ: ಆನೆ ಸಾವು, 6 ತಿಂಗಳಲ್ಲಿ ಸಕಲೇಶಪುರದಲ್ಲಿ 3 ಆನೆ ರೈಲಿಗೆ ಬಲಿ

ರೈಲು ಡಿಕ್ಕಿ ಹೊಡೆದ ಪರಿಣಾಮ 20 ವರ್ಷದ ಒಂಟಿ ಸಲಗವೊಂದು ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಕಾಕನಮನೆ ಬಳಿ ಸೋಮವಾರ ಮುಂಜಾನೆ ನಡೆದಿದೆ...

ಸಕಲೇಪುರ: ರೈಲು ಡಿಕ್ಕಿ ಹೊಡೆದ ಪರಿಣಾಮ 20 ವರ್ಷದ ಒಂಟಿ ಸಲಗವೊಂದು ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಕಾಕನಮನೆ ಬಳಿ ಸೋಮವಾರ ಮುಂಜಾನೆ ನಡೆದಿದೆ. 
ಇದರೊಂದಿಗೆ ಕಳೆದ 6 ತಿಂಗಳ ಅವಧಿಯಲ್ಲಿ ರೈಲಿಗೆ ಸಿಲುಕಿ ಒಟ್ಟು 3 ಆನೆಗಳು ಮೃತಪಟ್ಟಂತಾಗಿದೆ. 
ಕಾಕನಮನೆ ಬಳಿಯ 800/30 ಮೈಲಿಗಲ್ಲಿನ ಬಳಿ ಈ ದುರ್ಘಟನೆ ನಡೆದಿದೆ. ಆನೆ ಹಳಿ ದಾಟುವ ಸಂದರ್ಭದಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರವಾರ-ಬೆಂಗಳೂರು ಪ್ಯಾಸೆಂಜರಪ್ ರೈಲು ಡಿಕ್ಕಿ ಹೊಡೆದು ಆನೆ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. 
ಆಹಾರ ಹುಡುಕಿಕೊಂಡಿ ಬೇಲೂರು ಅಥವಾ ಚಿಕ್ಕಮಗಳೂರು ಕಡೆಯಿಂದ ಆನೆ ಈ ಭಾಗಕ್ಕೆ ಬಂದಿರಬಹುದು. ರೈಲು ಡಿಕ್ಕೆ ಹೊಡೆದ ರಭಸಕ್ಕೆ ಆನೆ ಗಂಭೀರವಾಗಿ ಗಾಯಗೊಂಡಿದ್ದು, ಕೆಲ ಹೊತ್ತಿನಲ್ಲಿಯೇ ರೈಲ್ವೇ ಹಳಿ ಪಕ್ಕವೇ ಕೊನೆಯುಸಿರೆಳೆದಿದೆ ಎಂದು ತಿಳಿಸಿದ್ದಾರೆ. 
ಸಲಗದ ಮರಣೋತ್ತರ ಪರೀಕ್ಷೆಯನ್ನು ಸ್ಥಳದಲ್ಲಿಯೇ ನಡೆಸಿ ಅಲ್ಲೇ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಇದೇ ಜೂ.3 ರಂದು ಸಕಲೇಶಪುರ ತಾಲೂಕು ಯಡಕುಮರಿ ಬಳಿ ರೈಲಿಗೆ ಸಿಲುಗಿ 2 ಮರಿಯಾನೆಗಳು ಬಲಿಯಾಗಿದ್ದವು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT