ಅಂಬರೀಷ್ 
ರಾಜ್ಯ

ದಿ.ಅಂಬರೀಶ್ ಗೆ ಅವಮಾನ: ಮೂರು ದಿನ ಆದರೂ ಲೋಕಸಭೆಯಲ್ಲಿ ಸಂತಾಪ ಗೌರವವಿಲ್ಲ!

ಕಲಾಪದಲ್ಲಿ ಅಂಬರೀಷ್ ಅವರಿಗೆ ಸಂತಾಪ ಸೂಚಿಸದಿರುವುದು, ರಾಜ್ಯ ಸಂಸದರ ಅಸಮಾಧಾನಕ್ಕೆ ಕಾರಣವಾಗಿದೆ....

ನವದೆಹಲಿ: ಮಾಜಿ ಕೇಂದ್ರ ಸಚಿವ, ಸ್ಯಾಂಡಲ್‍ವುಡ್ ನಟ ದಿ.ಅಂಬರೀಶ್ ಅವರಿಗೆ ಲೋಕಸಭೆಯಲ್ಲಿ ಮತ್ತೆ ಅವಮಾನವಾಗಿದೆ. ಕಲಾಪ ಆರಂಭದ ಮೊದಲ ದಿನ ನಿಧನ ಹೊಂದಿದ್ದ ಗಣ್ಯರಿಗೆ ಸಂತಾಪ ಸೂಚಿಸುವ ಸಂಪ್ರದಾಯವಿದೆ.
ಕಲಾಪದಲ್ಲಿ ಅಂಬರೀಷ್ ಅವರಿಗೆ ಸಂತಾಪ ಸೂಚಿಸದಿರುವುದು, ರಾಜ್ಯ ಸಂಸದರ ಅಸಮಾಧಾನಕ್ಕೆ ಕಾರಣವಾಗಿದೆ.
ಹಾಗಾಗಿ ಮಂಗಳವಾರದಿಂದ ಆರಂಭಗೊಂಡಿರುವ ಚಳಿಗಾಲದ ಅಧಿವೇಶನದಲ್ಲಿ ಕಲಾಪ ಆರಂಭಗೊಂಡಾಗ ಮಾಜಿ ಸಚಿವ ಅನಂತ್ ಕುಮಾರ್ ಅವರಿಗೆ ಸಂತಾಪ ಸೂಚಿಸಲಾಗಿತ್ತು. ಇದೇ ವೇಳೆಸಂತಾಪದ ಬಳಿಕ ಕಲಾಪ ಆರಂಭಗೊಂಡಾಗ ಮಾಜಿ ಪ್ರಧಾನಿ ದೇವೇಗೌಡ ಅವರು  ಸಂತಾಪ ಸೂಚಕ ಪಟ್ಟಿಯಲ್ಲಿ ಜಾಫರ್ ಶರೀಫ್ ಮತ್ತು ಅಂಬರೀಶ್ ಹೆಸರು ಕೈ ಬಿಟ್ಟ ವಿಚಾರವನ್ನು ಪ್ರಸ್ತಾಪ ಮಾಡಿದರು. 
ಈ ವಿಚಾರ ಗಮನಕ್ಕೆ ಬಂದ ಕೂಡಲೇ ಸ್ಪೀಕರ್ ಸುಮಿತ್ರಾ ಮಹಾಜನ್ ಬುಧವಾರ ಸಂತಾಪ ಸೂಚಿಸುತ್ತೇನೆ ಎಂದು ತಿಳಿಸಿದ್ದರು. ಆದರೆ ಇಂದು ಬೆಳಗ್ಗೆ ಮಾಜಿ ಕೇಂದ್ರ ರೈಲ್ವೇ ಸಚಿವ ಜಾಫರ್ ಶರೀಫ್ ಅವರಿಗೆ ಸಂತಾಪ ಸೂಚಿಸಿ ಅಂಬರೀಶ್ ಹೆಸರು ಕೈ ಬಿಡಲಾಯಿತು.
ಈ ಸಂದರ್ಭದಲ್ಲಿ ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಅಂಬರೀಶ್ ಅವರಿಗೆ ಸಂತಾಪ ಸೂಚಿಸುವಂತೆ ಮನವಿ ಮಾಡಿದರು. ಸ್ಪೀಕರ್ ಸುಮಿತ್ರಾ ಮಹಾಜನ್ ಗುರುವಾರ ಸಂತಾಪ ಸೂಚಿಸಲಾಗುವುದು ಎಂದು ತಿಳಿಸಿ ಮುಂದೂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT