ಅಂಬರೀಷ್ 
ರಾಜ್ಯ

ದಿ.ಅಂಬರೀಶ್ ಗೆ ಅವಮಾನ: ಮೂರು ದಿನ ಆದರೂ ಲೋಕಸಭೆಯಲ್ಲಿ ಸಂತಾಪ ಗೌರವವಿಲ್ಲ!

ಕಲಾಪದಲ್ಲಿ ಅಂಬರೀಷ್ ಅವರಿಗೆ ಸಂತಾಪ ಸೂಚಿಸದಿರುವುದು, ರಾಜ್ಯ ಸಂಸದರ ಅಸಮಾಧಾನಕ್ಕೆ ಕಾರಣವಾಗಿದೆ....

ನವದೆಹಲಿ: ಮಾಜಿ ಕೇಂದ್ರ ಸಚಿವ, ಸ್ಯಾಂಡಲ್‍ವುಡ್ ನಟ ದಿ.ಅಂಬರೀಶ್ ಅವರಿಗೆ ಲೋಕಸಭೆಯಲ್ಲಿ ಮತ್ತೆ ಅವಮಾನವಾಗಿದೆ. ಕಲಾಪ ಆರಂಭದ ಮೊದಲ ದಿನ ನಿಧನ ಹೊಂದಿದ್ದ ಗಣ್ಯರಿಗೆ ಸಂತಾಪ ಸೂಚಿಸುವ ಸಂಪ್ರದಾಯವಿದೆ.
ಕಲಾಪದಲ್ಲಿ ಅಂಬರೀಷ್ ಅವರಿಗೆ ಸಂತಾಪ ಸೂಚಿಸದಿರುವುದು, ರಾಜ್ಯ ಸಂಸದರ ಅಸಮಾಧಾನಕ್ಕೆ ಕಾರಣವಾಗಿದೆ.
ಹಾಗಾಗಿ ಮಂಗಳವಾರದಿಂದ ಆರಂಭಗೊಂಡಿರುವ ಚಳಿಗಾಲದ ಅಧಿವೇಶನದಲ್ಲಿ ಕಲಾಪ ಆರಂಭಗೊಂಡಾಗ ಮಾಜಿ ಸಚಿವ ಅನಂತ್ ಕುಮಾರ್ ಅವರಿಗೆ ಸಂತಾಪ ಸೂಚಿಸಲಾಗಿತ್ತು. ಇದೇ ವೇಳೆಸಂತಾಪದ ಬಳಿಕ ಕಲಾಪ ಆರಂಭಗೊಂಡಾಗ ಮಾಜಿ ಪ್ರಧಾನಿ ದೇವೇಗೌಡ ಅವರು  ಸಂತಾಪ ಸೂಚಕ ಪಟ್ಟಿಯಲ್ಲಿ ಜಾಫರ್ ಶರೀಫ್ ಮತ್ತು ಅಂಬರೀಶ್ ಹೆಸರು ಕೈ ಬಿಟ್ಟ ವಿಚಾರವನ್ನು ಪ್ರಸ್ತಾಪ ಮಾಡಿದರು. 
ಈ ವಿಚಾರ ಗಮನಕ್ಕೆ ಬಂದ ಕೂಡಲೇ ಸ್ಪೀಕರ್ ಸುಮಿತ್ರಾ ಮಹಾಜನ್ ಬುಧವಾರ ಸಂತಾಪ ಸೂಚಿಸುತ್ತೇನೆ ಎಂದು ತಿಳಿಸಿದ್ದರು. ಆದರೆ ಇಂದು ಬೆಳಗ್ಗೆ ಮಾಜಿ ಕೇಂದ್ರ ರೈಲ್ವೇ ಸಚಿವ ಜಾಫರ್ ಶರೀಫ್ ಅವರಿಗೆ ಸಂತಾಪ ಸೂಚಿಸಿ ಅಂಬರೀಶ್ ಹೆಸರು ಕೈ ಬಿಡಲಾಯಿತು.
ಈ ಸಂದರ್ಭದಲ್ಲಿ ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಅಂಬರೀಶ್ ಅವರಿಗೆ ಸಂತಾಪ ಸೂಚಿಸುವಂತೆ ಮನವಿ ಮಾಡಿದರು. ಸ್ಪೀಕರ್ ಸುಮಿತ್ರಾ ಮಹಾಜನ್ ಗುರುವಾರ ಸಂತಾಪ ಸೂಚಿಸಲಾಗುವುದು ಎಂದು ತಿಳಿಸಿ ಮುಂದೂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

SCROLL FOR NEXT