ಅಂಬರೀಷ್ 
ರಾಜ್ಯ

ದಿ.ಅಂಬರೀಶ್ ಗೆ ಅವಮಾನ: ಮೂರು ದಿನ ಆದರೂ ಲೋಕಸಭೆಯಲ್ಲಿ ಸಂತಾಪ ಗೌರವವಿಲ್ಲ!

ಕಲಾಪದಲ್ಲಿ ಅಂಬರೀಷ್ ಅವರಿಗೆ ಸಂತಾಪ ಸೂಚಿಸದಿರುವುದು, ರಾಜ್ಯ ಸಂಸದರ ಅಸಮಾಧಾನಕ್ಕೆ ಕಾರಣವಾಗಿದೆ....

ನವದೆಹಲಿ: ಮಾಜಿ ಕೇಂದ್ರ ಸಚಿವ, ಸ್ಯಾಂಡಲ್‍ವುಡ್ ನಟ ದಿ.ಅಂಬರೀಶ್ ಅವರಿಗೆ ಲೋಕಸಭೆಯಲ್ಲಿ ಮತ್ತೆ ಅವಮಾನವಾಗಿದೆ. ಕಲಾಪ ಆರಂಭದ ಮೊದಲ ದಿನ ನಿಧನ ಹೊಂದಿದ್ದ ಗಣ್ಯರಿಗೆ ಸಂತಾಪ ಸೂಚಿಸುವ ಸಂಪ್ರದಾಯವಿದೆ.
ಕಲಾಪದಲ್ಲಿ ಅಂಬರೀಷ್ ಅವರಿಗೆ ಸಂತಾಪ ಸೂಚಿಸದಿರುವುದು, ರಾಜ್ಯ ಸಂಸದರ ಅಸಮಾಧಾನಕ್ಕೆ ಕಾರಣವಾಗಿದೆ.
ಹಾಗಾಗಿ ಮಂಗಳವಾರದಿಂದ ಆರಂಭಗೊಂಡಿರುವ ಚಳಿಗಾಲದ ಅಧಿವೇಶನದಲ್ಲಿ ಕಲಾಪ ಆರಂಭಗೊಂಡಾಗ ಮಾಜಿ ಸಚಿವ ಅನಂತ್ ಕುಮಾರ್ ಅವರಿಗೆ ಸಂತಾಪ ಸೂಚಿಸಲಾಗಿತ್ತು. ಇದೇ ವೇಳೆಸಂತಾಪದ ಬಳಿಕ ಕಲಾಪ ಆರಂಭಗೊಂಡಾಗ ಮಾಜಿ ಪ್ರಧಾನಿ ದೇವೇಗೌಡ ಅವರು  ಸಂತಾಪ ಸೂಚಕ ಪಟ್ಟಿಯಲ್ಲಿ ಜಾಫರ್ ಶರೀಫ್ ಮತ್ತು ಅಂಬರೀಶ್ ಹೆಸರು ಕೈ ಬಿಟ್ಟ ವಿಚಾರವನ್ನು ಪ್ರಸ್ತಾಪ ಮಾಡಿದರು. 
ಈ ವಿಚಾರ ಗಮನಕ್ಕೆ ಬಂದ ಕೂಡಲೇ ಸ್ಪೀಕರ್ ಸುಮಿತ್ರಾ ಮಹಾಜನ್ ಬುಧವಾರ ಸಂತಾಪ ಸೂಚಿಸುತ್ತೇನೆ ಎಂದು ತಿಳಿಸಿದ್ದರು. ಆದರೆ ಇಂದು ಬೆಳಗ್ಗೆ ಮಾಜಿ ಕೇಂದ್ರ ರೈಲ್ವೇ ಸಚಿವ ಜಾಫರ್ ಶರೀಫ್ ಅವರಿಗೆ ಸಂತಾಪ ಸೂಚಿಸಿ ಅಂಬರೀಶ್ ಹೆಸರು ಕೈ ಬಿಡಲಾಯಿತು.
ಈ ಸಂದರ್ಭದಲ್ಲಿ ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಅಂಬರೀಶ್ ಅವರಿಗೆ ಸಂತಾಪ ಸೂಚಿಸುವಂತೆ ಮನವಿ ಮಾಡಿದರು. ಸ್ಪೀಕರ್ ಸುಮಿತ್ರಾ ಮಹಾಜನ್ ಗುರುವಾರ ಸಂತಾಪ ಸೂಚಿಸಲಾಗುವುದು ಎಂದು ತಿಳಿಸಿ ಮುಂದೂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT