ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಅಂತ್ಯ ಸಂಸ್ಕಾರಕ್ಕೆ ತೆರಳಿದ್ದವರ ಮೇಲೆ ಜೇನು ದಾಳಿ, ಓರ್ವ ಸಾವು

ಗ್ರಾಮದ ಹಿರಿಯ ಮಹಿಳೆಯ ಅಂತ್ಯಸಂಸ್ಕಾರಕ್ಕೆ ತೆರಳಿದ್ದ ವೇಳೆ ಜೇನು ನೊಣ ದಾಳಿ ಮಾಡಿದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯ ...

ಬೆಂಗಳೂರು: ಗ್ರಾಮದ ಹಿರಿಯ ಮಹಿಳೆಯ ಅಂತ್ಯಸಂಸ್ಕಾರಕ್ಕೆ ತೆರಳಿದ್ದ ವೇಳೆ ಜೇನು ನೊಣ ದಾಳಿ ಮಾಡಿದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯ ತಮಿಳುನಾಡು ಗಡಿ ಭಾಗ ಕೆಂಪಟ್ಟಿ ಗ್ರಾಮದಲ್ಲಿ ನಡೆದಿದೆ,
ಗ್ರಾಮದ ಹಿರಿಯ ಮಹಿಳೆ 102 ವರ್ಷದ ಶತಾಯುಷಿ ಮಹಿಳೆ ಮಂಗಳವಾರ ರಾತ್ರಿ ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದರು.  ಈ ವೇಳೆ ಗ್ರಾಮಸ್ಥರೆಲ್ಲರೂ ಸೇರಿ ಹಿರಿಯ ಮಹಿಳೆಗೆ ಗೌರವ ಸಲ್ಲಿಸಿ ಸ್ಮಶಾನಕ್ಕೆ ತೆರಳುವಾಗ ಮೆರೆವಣಿಗೆ ಮಾಡಿ ಪಟಾಕಿ ಹಚ್ಚಿದರು, ಪಟಾಕಿ ಕಿಡಿ ಮರವೊಂದಕ್ಕೆ ಗುಲಿದ ಪರಿಣಾಮ ಅಲ್ಲಿದ್ದ ಜೇನುಗೂಡಿನಿಂದ ಮೇಲೆದ್ದ ಜೇನು ನೊಣಗಳು ದಾಳಿ ಮಾಡಿವೆ.ಈ ವೇಳೆ ರಾಮಕ್ಕ ದೇಹವನ್ನು ಅಲ್ಲಿಯೇ ಇದ್ದ ಹೊಂಡಕ್ಕೆ ಹಾಕಿ ಗ್ರಾಮಸ್ಥರೆಲ್ಲಾ ಓಡಿಹೋಗಿದ್ದಾರೆ, 
ಅದರಲ್ಲಿ ರಾಜಪ್ಪ(55) ಎಂಬ ವ್ಯಕ್ತಿಗೆ ತೀವ್ರ ಗಾಯಗಳಾದ ಪರಿಣಾಮ ಆತನನ್ನು ಸೆಂಟ್ ಜಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಆತ ಸಾವನ್ನಪ್ಪಿದ್ದಾನೆ, ಗಾಯಗೊಂಡ ಅನೇಕರು ಆನೇಕಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT