ಬೆಳಗಾವಿ: ರಾಜ್ಯದ 22.38 ಲಕ್ಷ ರೈತರ ಸಹಕಾರ ಬ್ಯಾಂಕ್ಗಳ ಸಾಲವನ್ನು ಹಂತ ಹಂತವಾಗಿ ಜುಲೈ 2019ರ ಒಳಗಾಗಿ ಮನ್ನಾ ಮಾಡಲಾಗುತ್ತದೆ ಎಂದು ಸಹಕಾರಿ ಸಚಿವ ಬಂಡೆಪ್ಪ ಕಾಶೆಂಪೂರ ವಿಧಾನಪರಿಷತ್ನಲ್ಲಿ ಹೇಳಿದ್ದಾರೆ.
2019ರ ಜುಲೈ ಒಳಗೆ ಸಾಲ ಪಾವತಿ ಮಾಡಿರು ಪ್ರಮಾಣ ಪತ್ರ ರೈತರಿಗೆ ಸಿಗುತ್ತದೆ, ಸರ್ಕಾರಕ್ಕೆ ಕನಿಷ್ಠ ಪಕ್ಷ ನಾಲ್ಕು ವರ್ಷವಾದರೂ ಬೇಕಾಗುತ್ತದೆ. ಎಲ್ಲಾ ಸಹಕಾರಿ ಬ್ಯಾಂಕ್ ಗಳ ರೈತರ ಸಾಲ ಮನ್ನಾ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಎಲ್ಲಾ ಸಹಕಾರ ಬ್ಯಾಂಕುಗಳು ಹಾಗೂ ವಾಣಿಜ್ಯ ಬ್ಯಾಂಕ್ ಗಳ ಸಾಲ ಮನ್ನಾ ಮಾಡುವ ಐತಿಹಾಸಿಕ ನಿರ್ಧಾರವನ್ನು ಸಮ್ಮಿಶ್ರ ಸರ್ಕಾರ ಕೈಗೊಂಡಿದೆ. ಕರ್ನಾಟಕ ಸರ್ಕಾರ ಕೈಗೊಂಡ ನಿರ್ಧಾರವನ್ನು ಬೇರೆ ರಾಜ್ಯಗಳು ಅನುಸರಿಸುತ್ತಿದ್ದು, ರೈತರ ಸಾಲಮನ್ನಾ ಮಾಡಲು ಮುಂದಾಗಿವೆ. 22 ಸಾವಿರ ರೈತರ ಸಾಲಮನ್ನಾ ಮಾಡಲು ನಿರ್ಧರಿಸಿರುವುದಾಗಿ ಬಂಡೆಪ್ಪ ಕಾಶೆಂಪೂರ್ ತಿಳಿಸಿದ್ದಾರೆ.