ಸಂಗ್ರಹ ಚಿತ್ರ 
ರಾಜ್ಯ

ನಿನ್ನ ಹರಕೆಯಿಂದ ಮಗು ಹುಟ್ತು, ಆದರೆ ಈಗ ಗಂಡನನ್ನು ಕಿತ್ತುಕೊಂಡೆಯಾ ಅಮ್ಮಾ; ಕರಳು ಹಿಂಡುವಂತಿತ್ತು ಬಾಣಂತಿ ರೋಧನಾ!

ತಾಯಿ ನಿನಗೆ ಹರಕೆ ಮಾಡಿಕೊಂಡಿದ್ದಕ್ಕೆ ಮಗುವನ್ನು ಕರುಣಿಸಿದೆ. ಆದರೆ ಈಗ ತನ್ನ ಗಂಡನನ್ನೇ ಕಿತ್ತುಕೊಂಡೆಯಾ ಎಂದು ಬಾಣಂತಿ ಗಂಡನ ಶವದ ಮುಂದೆ ರೋಧಿಸುತ್ತಿದ್ದ ದೃಶ್ಯ ಮನಕಲಕುವಂತಿತ್ತು...

ಚಾಮರಾಜನಗರ: ತಾಯಿ ನಿನಗೆ ಹರಕೆ ಮಾಡಿಕೊಂಡಿದ್ದಕ್ಕೆ ಮಗುವನ್ನು ಕರುಣಿಸಿದೆ. ಆದರೆ ಈಗ ತನ್ನ ಗಂಡನನ್ನೇ ಕಿತ್ತುಕೊಂಡೆಯಾ ಎಂದು ಬಾಣಂತಿ ಗಂಡನ ಶವದ ಮುಂದೆ ರೋಧಿಸುತ್ತಿದ್ದ ದೃಶ್ಯ ಮನಕಲಕುವಂತಿತ್ತು. 
ಹುನೂರು ತಾಲೂಕಿನ ಸುಳ್ವಾಡಿ ಗ್ರಾಮದ ಶಾಂತರಾಜು ಎಂಬುವರು ನಿನ್ನೆ ಸುಳ್ವಾಡಿ ಮಾರಮ್ಮನ ದೇವಸ್ತಾನದಲ್ಲಿ ನೀಡಿದ್ದ ಪ್ರಸಾದ ಸೇವಿಸಿ ಅಸುನೀಗಿದ್ದು ಗಂಡನನ್ನು ಕಳೆದುಕೊಂಡ ಪತ್ನಿಯ ರೋಧನೆ ನಿಜಕ್ಕೂ ಎಂತವರ ಮನಸ್ಸನ್ನು ಹಿಂಡುವಂತಿತ್ತು. 
ಶಾಂತರಾಜು ಎಂಬುವರಿಗೆ ಹಲವು ವರ್ಷಗಳಿಂದ ಮಕ್ಕಳಿರಲಿಲ್ಲ. ಮಕ್ಕಳಾಗದ್ದಕ್ಕೆ ಓಂ ಶಕ್ತಿ ದೇವರಿಗೆ ಹರಕೆ ಹೊತ್ತಿಕೊಂಡಿದ್ದರು. ದೇವಿಯ ಅನುಗ್ರಹವೆಂಬಂತೆ ದಂಪತಿಗೆ ಮೂರು ತಿಂಗಳ ಹಿಂದೆ ಮಗು ಹುಟ್ಟಿತ್ತು. ದೇವಿಯ ಹರಕೆಯಿಂದ ಮಗು ಜನನವಾಗಿದೆ ಎಂದು ತಿಳಿದು ದಂಪತಿ ಖುಷಿಯಿಂದ ಹರಕೆ ತೀರಿಸಲು ಮಾರಮ್ಮ ದೇವಸ್ಥಾನಕ್ಕೆ ಬಂದಿದ್ದರು. 
ದೇವಿಗೆ ಪೂಜೆ ಸಲ್ಲಿಸಿದ ಬಳಿಕ ಶಾಂತರಾಜು ಪ್ರಸಾದವನ್ನು ಸೇವಿಸಿದ್ದಾರೆ. ಪ್ರಸಾದವನ್ನು ತಿಂದು ಅಸ್ವಸ್ಥಗೊಂಡಿದ್ದ ಶಾಂತರಾಜು ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. 
ಚಾಮರಾಜನಗರ ವಿಷ ಪ್ರಸಾದ ದುರಂತಕ್ಕೆ ಬಲಿಯಾದವರ ಸಂಖ್ಯೆ 11ಕ್ಕೆ ಏರಿಕೆಯಾಗಿದ್ದು, ಬಿದರಳ್ಳಿ ಗ್ರಾಮವೊಂದರಲ್ಲೇ 7 ಮಂದಿ ದುರ್ಮರಣ ಹೊಂದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವರ್ತನೆ ಬದಲಿಸಿಕೊಳ್ಳಿ, ಒಪ್ಪಂದ ಸಂಪೂರ್ಣವಾಗಿ ಪಾಲಿಸಬೇಕು: ಇರಾನ್‌ಗೆ JD ವ್ಯಾನ್ಸ್ ಎಚ್ಚರಿಕೆ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: 7ರಲ್ಲಿ 5 ಸ್ಥಾನ ಕಾಂಗ್ರೆಸ್ ಪಾಲು, ಬಿಜೆಪಿಗೆ 2, ಜೆಡಿಎಸ್‌ಗೆ ಅಡ್ಡ ಮತದಾನದ ಆಘಾತ

ಪರಿಷತ್ ಚುನಾವಣೆ: ಬಿಜೆಪಿಯ 3 ಶಾಸಕರಿಂದ ಅಡ್ಡಮತದಾನ, ಸಿಕ್ಕೇ ಸಿಗ್ತಾರೆ.. ಶಿಸ್ತುಕ್ರಮ ಗ್ಯಾರಂಟಿ: R Ashok

BJP-JDS ಅಡ್ಡ ಮತದಾನದಿಂದ Congress 5ನೇ ಅಭ್ಯರ್ಥಿ ಜಯ; ಇದು ಪ್ರಜಾಪ್ರಭುತ್ವದ ಗೆಲುವು: ಸುರ್ಜೇವಾಲಾ

Bihar Horror: ಯಜಮಾನನ ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ, ಗುಪ್ತಾಂಗದಲ್ಲಿ ಜೀವಂತ ಬುಲೆಟ್, ಕಲ್ಲು, ಮರದ ತುಂಡು ಪತ್ತೆ!

SCROLL FOR NEXT