ಮೈಸೂರಿನ ಆಸ್ಪತ್ರೆಯಲ್ಲಿ 30ಮಂದಿ ಜೀವನ್ಮರಣದ ನಡುವೆ ಹೋರಾಟ 
ರಾಜ್ಯ

ವಿಷಾಹಾರ ಸೇವನೆ: ಮೈಸೂರಿನ ಆಸ್ಪತ್ರೆಯಲ್ಲಿ 30ಮಂದಿ ಜೀವನ್ಮರಣದ ನಡುವೆ ಹೋರಾಟ!

ಚಾಮರಾಜನಗರ ವಿಷ ಪ್ರಸಾದ ದುರಂತಕ್ಕೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ, ಈ ನಡುವೆ ಮೈಸೂರಿನ ಹಲವು ಮಂದಿ ಚಿಕಿತ್ಸೆ ಪಡೆಯುತ್ತಿದ್ದು ...

ಮೈಸೂರು: ಚಾಮರಾಜನಗರ ವಿಷ ಪ್ರಸಾದ ದುರಂತಕ್ಕೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ, ಈ ನಡುವೆ ಮೈಸೂರಿನ ಹಲವು ಮಂದಿ ಚಿಕಿತ್ಸೆ ಪಡೆಯುತ್ತಿದ್ದು ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಈ ರೀತಿ ಸಂಭವಿಸಬಹುದೆಂದು ನಾವು ಎಂದಿಗೂ ನಿರೀಕ್ಷಿಸಿರಲಿಲ್ಲ, ನನ್ನ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕೆಂದು ಬಯಸಿದ್ದ, ಆತನಿಗೆ ಈ ರೀತಿ ಸಾವು ಬರುತ್ತದೆಂದು ನಾವು ಎಣಿಸಿರಲಿಲ್ಲ ಎಂದು ಶುಕ್ರವಾರ ಜೆಎಸ್ ಎಸ್ ಆಸ್ಪತ್ರೆಯಲ್ಲಿ ಮೃತರಾದ ಕೃಷ್ಣ ನಾಯ್ಕ ಅವರ ಭಾವಮೈದುನ ಎಂಜಿ ನಾಯಕ್ ತಿಳಿಸಿದ್ದಾರೆ.
ಕೃಷ್ಣ ನಾಯಕ್ ಪತ್ನಿ ಬಿಲ್ಲಿ ಬಾಯ್ ನರ್ಸಿಂಗ್ ವಿದ್ಯಾರ್ಥಿಯಾಗಿದ್ದು, ಮತ್ತು ಮಗಳು ಪ್ರಿಯ ಬಾಯ್ ಅವರ ಪರಿಸ್ಥಿತಿ ಇನ್ನೂ ಗಂಭೀರವಾಗಿದೆ,. 
ಮಿಲ್ಲಿ ಬಾಯ್ ಸ್ಥಿತಿ ಚಿಂತಾಜನಕವಾಗಿದೆ, 48 ಗಂಟೆಗಳ ಕಾಲ ಯಾವುದನ್ನು ಹೇಳಲು ಸಾಧ್ಯವಿಲ್ಲ , ಇದೇ ದೇವಾಲಯದಲ್ಲಿ ಹಲವು ಮಂದಿಯನ್ನು ಕಳೆದುಕೊಂಡಿದ್ದೇವೆ ಎಂದು ಮಿಲ್ಲಿ ಬಾಯ್ ಸಂಬಂಧಿ ಗೌರಿ ಹೇಳಿದ್ದಾರೆ.
ಮಿಲ್ಲಿ ಬಾಯ್ 2ನೇ ಮಗಳು ರಾಣಿ ಬಾಯ್ ಪದವಿ ವಿದ್ಯಾರ್ಥಿನಿ, ಮೈಸೂರಿನಲ್ಲಿದ್ದ ಕಾರಣ ಆಕೆ ಬಚಾವಾಗಿದ್ದಾಳೆ
ಮೈಸೂರಿನಲ್ಲಿ ಒಟ್ಟು  104 ಮಂದಿ ರೋಗಿಗಳು ದಾಖಲಾಗಿದ್ದು, ಅದರಲ್ಲಿ 30 ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT