ಐಜಿಪಿ ಶರತ್ ಚಂದ್ರ 
ರಾಜ್ಯ

ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನದ ಪ್ರಸಾದದಲ್ಲಿ ಕೀಟನಾಶಕ ಬೆರತದ್ದು ನಿಜ: ಐಜಿಪಿ ಶರತ್ ಚಂದ್ರ

ಸುಳ್ವಾಡಿ ಗ್ರಾಮದ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನದ ಪ್ರಸಾದ ಸೇವಿಸಿ ೧೪ ಮಂದಿ ಸಾವಿಗೀಡಾದ ಪ್ರಕರಣಕ್ಕೆ ಮಹತ್ವದ ತಿರುವು ದೊರಕಿದೆ. ಪ್ರಸಾದದಲ್ಲಿ ಕೀಟನಾಶಕ ಬೆರೆತಿರುವುದು ಖಚಿತವಾಗಿದೆ.

ಕೊಳ್ಳೇಗಾಲ: ಸುಳ್ವಾಡಿ ಗ್ರಾಮದ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನದ ಪ್ರಸಾದ ಸೇವಿಸಿ 14 ಮಂದಿ ಸಾವಿಗೀಡಾದ ಪ್ರಕರಣಕ್ಕೆ ಮಹತ್ವದ ತಿರುವು ದೊರಕಿದೆ. ಪ್ರಸಾದದಲ್ಲಿ ಕೀಟನಾಶಕ ಬೆರೆತಿರುವುದು ಖಚಿತವಾಗಿದೆ.
ವಿಧಿವಿಜ್ಞಾನ ಪ್ರಯೋಗಾಲಯ(ಎಫ್‍ಎಸ್‍ಎಲ್) ವರದಿ ಬಹಿರಂಗವಾಗಿದ್ದು ಇದರಲ್ಲಿ ಪ್ರಸಾದದಲ್ಲಿ ಮೋನೋ ಕ್ರೊಟೋಫೋಸ್ ಎಂಬ ಕೀಟನಾಶಕ ಬೆರೆತದ್ದು ಸ್ಪಷ್ಟವಾಗಿದೆ ಎಂದು ದಕ್ಷಿಣ ವಲಯ ಐಜಿಪಿ ಶರತ್ ಚಂದ್ರ ಹೇಳಿದ್ದಾರೆ.
ದುಷ್ಕರ್ಮಿಗಳು ಮೊದಲು ನೀರಿನಲ್ಲಿ ಕೀಟನಾಶಕ ಬೆರೆಸಿ ಬಳಿಕ ಅದನ್ನು ಪ್ರಸಾದಕ್ಕೆ ಬೆರೆಸಿದ್ದರೆನ್ನುವುದು ಪ್ರಾಥಮಿಕ ತನಿಖೆಯಿಂದ ಬಹಿರಂಗವಾಗಿದೆ.
"ಪ್ರಸಾದದಲ್ಲಿ ಆರ್ಗಾನ್ ಪಾಸ್ಪಾರಸ್ ಕಾಂಪೌಂಡ್ ಮೊನೊ ಕ್ರೋಟೋ ಫೋಸ್ ಮಿಶ್ರಣ ಆಗಿದೆ ಎಂಬ ವರದಿ ಬಂದಿದೆ.ಇವು ಕೀಟನಾಶಕವಾಗಿದೆ.ಗಿಡಗಳಿಗೆ ಹುಳು, ರೋಗ ಬಾರದಂತೆ ಇದನ್ನು ಬಳಸಲಾಗುತ್ತದೆ" ಎಂದ ಐಜಿಪಿ ತನಿಖೆ ಸರಿಯಾದ ಮಾರ್ಗದಲ್ಲಿ ಸಾಗುತ್ತಿದೆ, ಒಟ್ಟು 13 ಅಧಿಕಾರಿಗಳ ತಂಡ ಪ್ರಕರಣದ ತನಿಖೆ ಕೈಗೊಂಡಿದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

SCROLL FOR NEXT