ಸಂಗ್ರಹ ಚಿತ್ರ 
ರಾಜ್ಯ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ನಾಡಧ್ವಜವಿರುವ ಟಿ-ಶರ್ಟ್ ಖರೀದಿಗೆ ವಿದ್ಯಾರ್ಥಿಗಳ ಮೇಲೆ ಒತ್ತಡ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹತ್ತಿರ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಸಮ್ಮೇಳನಕ್ಕೆ ಆಗನಿಸುತ್ತಿರುವ ಶಾಲೆಗಳ ವಿದ್ಯಾರ್ಥಿಗಳು ನಾಡಧ್ವಜ ಇರುವ ಟಿ-ಶರ್ಟ್ಸ್ ಗಳನ್ನು ಖರೀದಿ ಮಾಡುವಂತೆ ಒತ್ತಡ ಹೇರಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ...

ಧಾರವಾಡ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹತ್ತಿರ ಬರುತ್ತಿದ್ದು, ಈ ಹಿನ್ನಲೆಯಲ್ಲಿ ಸಮ್ಮೇಳನಕ್ಕೆ ಆಗನಿಸುತ್ತಿರುವ ಶಾಲೆಗಳ ವಿದ್ಯಾರ್ಥಿಗಳು ನಾಡಧ್ವಜ ಇರುವ ಟಿ-ಶರ್ಟ್ಸ್ ಗಳನ್ನು ಖರೀದಿ ಮಾಡುವಂತೆ ಒತ್ತಡ ಹೇರಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. 
ಸಮ್ಮೇಳನದಲ್ಲಿ ಒಟ್ಟು 18 ಶಾಲೆಗಳ ವಿದ್ಯಾರ್ಥಿಗಳಿಗೆ ಆಹ್ವಾನ ನೀಡಲಾಗಿದ್ದು, ಈ ವಿದ್ಯಾರ್ಥಿಗಳಿಗೆ ನಾಡಧ್ವಜ ಇರುವ ಟಿ-ಶರ್ಟ್ಸ್ ಗಳನ್ನು ಖರೀದಿ ಮಾಡುವಂತೆ ಒತ್ತಡ ಹೇರಲಾಗುತ್ತಿದೆ ಎಂದು ತಿಳಿದುಬಂದಿದೆ. 
ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರುತ್ತಿರುವುದರಿಂದ ಇದು ಪೋಷಕರಿಗೆ ತಲೆನೋವಾಗಿ ಪರಿಣಮಿಸಿದೆ. ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರುತ್ತಿರುವುದರಿಂದ ಯಾವುದೇ ದಾರಿಯಿಲ್ಲದೆ ಒಲ್ಲದ ಮನಸ್ಸಿನಿಂದ ಟಿ-ಶರ್ಟ್ಸ್ ಗಳನ್ನು ಖರೀದಿ ಮಾಡುತ್ತಿದ್ದಾರೆಂದು ಹೇಳಲಾಗುತ್ತಿದೆ. 
ಶಾಲಾ ಆಡಳಿತ ಮಂಡಳಿ ಒಂದೊಂದು ಟಿ-ಶರ್ಟ್ಸ್'ಗೆ ರೂ.200 ಪಡೆಯುತ್ತಿದೆ. ಪ್ರತೀ ವರ್ಷ ಒಂದಲ್ಲ ಒಂದು ವಿಚಾರವನ್ನು ಹಿಡಿದುಕೊಂಡು ವಿದ್ಯಾರ್ಥಿಗಳ ಬಳಿ ಹಣವನ್ನು ವಸೂಲಿ ಮಾಡುತ್ತಲೇ ಇರುತ್ತದೆ. ಸರ್ಕಾರವೇ ಟೀ-ಶರ್ಟ್ಸ್ ಗಳನ್ನು ವಿತರಿಸಿದರೆ ಉತ್ತಮವಾಗಿರುತ್ತದೆ ಎಂದು ಪೋಷಕರು ಹೇಳಿದ್ದಾರೆ. 
ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿ ಪ್ರತಿಕ್ರಿಯೆ ನೀಡಿದ್ದು, 18 ಶಾಲೆಗಳು ಟಿ-ಶರ್ಟ್ಸ್ ಗಳನ್ನು ಖರೀದಿ ಮಾಡುವಂತೆ ತಿಳಿಸಿರುವುದು ನಿಜ. ಆದರೆ, ಇದನ್ನು ನಾವು ಕಡ್ಡಾಯ ಮಾಡಿಲ್ಲ. ಈ ಬಗ್ಗೆ ಶೀಘ್ರದಲ್ಲಿಯೇ ಸಭೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT