ಸಂಗ್ರಹ ಚಿತ್ರ 
ರಾಜ್ಯ

ಮೆಟ್ರೋ ಪಿಲ್ಲರ್ ದುರಸ್ತಿ: ವಾರಾಂತ್ಯ ಸಂಚಾರದಲ್ಲಿ ಯಾವ ವ್ಯತ್ಯಯ ಇಲ್ಲ, ಬಿಎಂಆರ್‌ಸಿಎಲ್ ಸ್ಪಷ್ಟನೆ

ಈ ಸುದ್ದಿ ಓದಿದ ನಂತರ ಬೆಂಗಳೂರು ನಗರದ ಮೆಟ್ರೋ ಪ್ರಯಾಣಿಕರು ಕೊಂಚ ರಿಲ್ಯಾಕ್ಸ್ ಆಗಬಹುದು.

ಬೆಂಗಳೂರು: ಈ ಸುದ್ದಿ ಓದಿದ ನಂತರ ಬೆಂಗಳೂರು ನಗರದ ಮೆಟ್ರೋ ಪ್ರಯಾಣಿಕರು ಕೊಂಚ ರಿಲ್ಯಾಕ್ಸ್ ಆಗಬಹುದು. ಮೆಟ್ರೋ  ಪಿಲ್ಲರ್ ದುರಸ್ತಿ ಕಾಮಗಾರಿಯನ್ನು ಮುಂದಿನ ವಾರಕ್ಕೆ ಮುಂದೂಡಲಾಗಿದ್ದು ನಾಳೆ (ಶನಿವಾರ) ಹಾಗೂ ಭಾನುವಾರಗಳಂದು ನಗರದಲ್ಲಿ ಮೆಟ್ರೋ ರೈಲು ಎಂದಿನಂತೆ ಸಂಚರಿಸಲಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಎಂಜಿ ರಸ್ತೆ ಟ್ರಿನಿಟಿ ವೃತ್ತದ ಸಮೀಪ  ಮೆಟ್ರೋ ಸೇತುವೆಯ ವಯಾಡಕ್ಟ್ ನಲ್ಲಿ ಬಿರುಕು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಶನಿವಾರ ಹಾಗೂ ಭಾನುವಾರ ದುರಸ್ತಿ ಕಾರ್ಯ ಕೈಗೊಳ್ಳಲು ಬಿಎಂಆರ್‌ಸಿಎಲ್  ನಿರ್ಧರಿಸಿತ್ತು. ಇದೇ ಕಾರಣಕ್ಕೆ ನಾಳೆಯಿಂದ ಎರಡು ದಿನ ಮೆಟ್ರೋ ರೈಲು ಸಂಚಾರ ಇರಲ್ಲ ಎನ್ನಲಾಗಿತ್ತು. ಆದರೆ ಈಗನಿಗದಿತ ದುರಸ್ತಿ ಕಾರ್ಯವನ್ನು ಮುಂದಿನ ವಾರಕ್ಕೆ ಮುಂದೂಡಲಾಗಿದೆ. ಹೀಗಾಗಿ ಈ ವಾರಾಂತ್ಯ ಮೆಟ್ರೋ ಸಂಚಾರದಲ್ಲಿ ಯಾವ ಬದಲಾವಣೆ ಇರುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
 ಟ್ರಿನಿಟಿ ನಿಲ್ದಾಣದ ಬಳಿ ಕಾಣಿಸಿಕೊಂಡಿರುವ ಬಿರುಕು ಆತಂಕಕ್ಕೆ ಕಾರಣವಾಗಿದೆ. ಇದೇ ವೇಳೆ ಈ ಮಾರ್ಗದಲ್ಲಿ ಚಲಿಸುವ ಮೆಟ್ರೋ ರೈಲುಗಳ ವೇಗವನ್ನು ಕಡಿತಗೊಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT