ಹೆಚ್.ಡಿ.ಕುಮಾರಸ್ವಾಮಿ 
ರಾಜ್ಯ

ಫೆಬ್ರವರಿಯಲ್ಲಿ ರಾಜ್ಯ ಬಜೆಟ್ ಮಂಡನೆ: ಸಿಎಂ ಕುಮಾರಸ್ವಾಮಿ

ಫೆಬ್ರವರಿ ಮಧ್ಯಂತರ ಅವಧಿಯಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡುತ್ತೇನೆಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದ್ದಾರೆ...

ಬೆಳಗಾವಿ: ಫೆಬ್ರವರಿ ಮಧ್ಯಂತರ ಅವಧಿಯಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡುತ್ತೇನೆಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದ್ದಾರೆ. 
ನಿನ್ನೆ ಸಂಜೆ ಬೆಳಗಾವಿಯ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಬಜೆಟ್'ಗೆ ಕಾಯದೆ ರಾಜ್ಯದ ಬಜೆಟ್'ನ್ನು ಫೆಬ್ರವರಿ ಮಧ್ಯಂತರ ಅವಧಿಯಲ್ಲಿ ಮಂಡನೆ ಮಾಡಲಾಗುತ್ತದೆ. ಈ ಬಾರಿಯ ಬಜೆಟ್ ಮಂಡನೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ. ರಾಜ್ಯ ಸರ್ಕಾರದ ಭರವಸೆಯಂತೆ ರೂ, 17 ಲಕ್ಷ ರೈತರ ತಲಾ ರೂ.50 ಸಾವಿರ ಕೃಷಿ ಸಾಲದ ಹಣವನ್ನು ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ 10 ದಿನಗಳಲ್ಲಿ ಪಾವತಿ ಮಾಡಲಾಗುವುದು. ಜೊತೆಗೆ ಅಷ್ಟೂ ಮಂದಿಗೆ ಸರ್ಕಾರದ ವತಿಯಿಂದಲೇ ಋಣಮುಕ್ತ ಪ್ರಮಾಣಪತ್ರ ವಿತರಿಸಲಾಗುವುದು. ಉಳಿದ ರೂ.1.5 ಲಕ್ಷ ಬಾಕಿ ಹಣವನ್ನು ಮುಂದಿನ ಬಜೆಟ್ ನಲ್ಲಿ 2 ಕಂತುಗಳಲ್ಲಿ ಪಾವತಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. 
ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲವನ್ನು ಮನ್ನಾ ಮಾಡಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಒಟ್ಟು ರೂ.21 ಲಕ್ಷ ಮಂದಿಯ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಸಾಲ ಮನ್ನಾಗೆ ಸಿದ್ಧತೆ ನಡೆಸಿದ್ದೇವೆ. ಇದರಲ್ಲಿ ರೂ.17 ಲಕ್ಷ ಖಾತೆಗಳು ಚಾಲ್ತಿ ಖಾತೆ ಹಾಗೂ 2.82 ಲಕ್ಷ ಎನ್'ಪಿಎ ಖಾತೆಗಳಿವೆ. 
ಬಜೆಟ್ ನಲ್ಲಿ ಈಗಾಗಲೇ ರೂ.6,500 ಕೋಟಿ ಮೀಸಲಿಟ್ಟಿದ್ದು, ಈ ಹಣ ಬಳಕೆ ಮಾಡಿಕೊಂಡು ರೂ.17 ಲಕ್ಷ ಖಾತೆಗಳಿಗೆ ಮೊದಲ ಹಂತವಾಗಿ ತಲಾ ರೂ. ಸಾವಿರ ಸಾಲ ಪಾವತಿ ಮಾಡಲಾಗುವುದು. ಜೊತೆಗೆ ಸರ್ಕಾರದ ವತಿಯಿಂದಲೇ ಋಣಮುಕ್ತ ಪ್ರಮಾಣಪತ್ರ ನೀಡಲಾಗುತ್ತದೆ ಎಂದು ಘೋಷಣೆ ಮಾಡಿದ್ದಾರೆ. 
 ಸಹಕಾರಿ ಬ್ಯಾಂಕ್ ಗಳ ಸಾಲ ಹಾಗೂ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾದಿಂ ಲಕ್ಷ ರೈತ ಕುಟುಂಬಗಳಿಗೆ ಅನುಕೂಲ ಆಗಲಿದೆ. ಈವರೆಗೂ ರಾಷ್ಟ್ರೀಕೃತ ಬ್ಯಾಂಕ್ ಗಳಿಂದ ಯಾರೊಬ್ಬರಿಗೂ ಸಾಲ ವಸೂಲಾತಿ ನೋಟಿಸ್ ನೀಡಿಲ್ಲ. ಬದಲಿಗೆ ಬಾಕಿ ಉಳಿಸಿಕೊಂಡಿರುವ ಸಾಲ ತೀರಿಸಲು ರಿಯಾಯಿತಿ ಕೊಡುಗೆಗಳನ್ನು ತಿಳಿಸಲು ಪತ್ರಗಳನ್ನು ಬರೆದಿದ್ದಾರೆ. ಹೀಗಾಗಿ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT