ಸಂಗ್ರಹ ಚಿತ್ರ 
ರಾಜ್ಯ

ಕೆಎಎಸ್ ಅಧಿಕಾರಿಗಳ ಹುದ್ದೆ ರಕ್ಷಿಸುವ ಮಸೂದೆ ಪಾಸ್

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್'ಸಿ)ದಡಿ 1998. 1999, 2000ನೇ ಸಾಲಿನಲ್ಲಿ ನೇಮಕಗೊಂಡು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದ 47ಕ್ಕೂ ಹೆಚ್ಚು ಕೆಎಎಸ್ ಅಧಿಕಾರಿಗಳಿಗೆ ಸದ್ಯಕ್ಕೆ ನಿರಾಳವಾಗಿದ್ದಾರೆ...

ಬೆಳಗಾವಿ: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್'ಸಿ)ದಡಿ 1998. 1999, 2000ನೇ ಸಾಲಿನಲ್ಲಿ ನೇಮಕಗೊಂಡು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದ 47ಕ್ಕೂ ಹೆಚ್ಚು ಕೆಎಎಸ್ ಅಧಿಕಾರಿಗಳಿಗೆ ಸದ್ಯಕ್ಕೆ ನಿರಾಳವಾಗಿದ್ದಾರೆ. 
2018ನೇ ಸಾಲಿನ ಕರ್ನಾಟಕ ಸಿವಿಲ್ ಸೇವೆಗಳ (ನೇಮಕಾತಿಯ ಸಮಯದಲ್ಲಿ ಅಭ್ಯರ್ಥಿಗಳ ಆಯ್ಕೆಯ ಕಾರ್ಯವಿಧಾನ) ವಿಧೇಯಕಕ್ಕೆ ಉಭಯ ಸದನಗಳು ಅಂಗೀಕಾರ ನೀಡಿದೆ. 
ಪ್ರತಿಪಕ್ಷಗಳ ವಿರೋಧದ ನಡುವೆಯೂ ವಿಧೇಯಕವನ್ನು ಧ್ವನಿ ಮತದ ಮೂಲಗ ಒಪ್ಪಿಗೆ ನೀಡಲಾಯಿತು. ವಿಧಾನಸಬೆ ಮತ್ತು ವಿಧಾನಪರಿಷತ್ತ ನಲ್ಲಿ ಕಾನೂನು ಸಚಿವ ಕೃಷ್ಣಬೈರೇಗೌಡ ವಿಧೇಯಕವನ್ನು ಪರ್ಯಾಲೋಚಿಸುವಂತೆ ಸೂಚಿಸಿದರು. ಸಭಾಧ್ಯಕ್ಷು ವಿಧೇಯಕವನ್ನು ಮತಕ್ಕೆ ಹಾಕಿದಾದ ಧ್ವನಿಮತದಿಂದ ಅಂಗೀಕರಿಸಲಾಯಿತು. 
1998, 1999, 2000ನೇ ಸಾಲಿನಲ್ಲಿ ನಡೆದ ಪ್ರೊಬೆಷನರಿ ಹುದ್ದೆಯ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಅಕ್ರಮವಾಗಿ ನೇಮಕಗೊಂಡಿರುವವರನ್ನು ವಜಾಗೊಳಿಸಿ ಎಂದು ಹೈಕೋರ್ಟ್ ನೀಡಿರುವ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಸರ್ಕಾರವು ನ್ಯಾಯಾಲಯದ ಆದೇಶ ಪಾಲನೆ ಮಾಡಬೇಕು. ಇಲ್ಲವೇ, ನ್ಯಾಯಾಂಗ ನಂದನೆ ಎದುರಿಸಬೇಕಾಗಿತ್ತು. ಇದರಿಂದ ತಪ್ಪಿಸಿಕೊಳ್ಳಲು ಸಿವಿಲ್ ಸೇವೆಗಳ ನೇಮಕಾತಿ ವಿಧೇಯಕವನ್ನು ರಚಿಸಲಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT