ಸಂಗ್ರಹ ಚಿತ್ರ 
ರಾಜ್ಯ

ತೀವ್ರ ಗದ್ದಲದ ನಡುವೆಯೇ ಚರ್ಚೆಗಳಿಲ್ಲದೆ ಮಸೂದೆಗಳು ಅಂಗೀಕಾರ

ಉತ್ತರ ಕರ್ನಾಟಕದ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ಶುಕ್ರವಾರವೂ ಮುಂದುವರೆಸಿದ ಧರಣಿ, ಘೋಷಣೆಗಳ ನಡುವೆಯೇ ಸರ್ಕಾರ ಲಿಖಿತ ಉತ್ತರಗಳ ಸಲ್ಲಿಕೆ, ವಿವಿಧ ವಿಧೇಯಕಗಳನ್ನು ಮಂಡಿಸಿ ಯಾವುದೇ ಚರ್ಚೆಗಳಿಲ್ಲದೆಯೇ ಒಪ್ಪಿಗೆ ಪಡೆಯಿತು...

ಬೆಳಗಾವಿ: ಉತ್ತರ ಕರ್ನಾಟಕದ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ಶುಕ್ರವಾರವೂ ಮುಂದುವರೆಸಿದ ಧರಣಿ, ಘೋಷಣೆಗಳ ನಡುವೆಯೇ ಸರ್ಕಾರ ಲಿಖಿತ ಉತ್ತರಗಳ ಸಲ್ಲಿಕೆ, ವಿವಿಧ ವಿಧೇಯಕಗಳನ್ನು ಮಂಡಿಸಿ ಯಾವುದೇ ಚರ್ಚೆಗಳಿಲ್ಲದೆಯೇ ಒಪ್ಪಿಗೆ ಪಡೆಯಿತು.

ಕಲಾಪ ಆರಂಭವಾಗುತ್ತಿದ್ದಂತೆಯೇ ಬಿಜೆಪಿ ಸದಸ್ಯರು ಸಭಾಪತಿಗಳ ಎದುರು ನಿಂತು ಘೋಷಣೆ ಕೂಗುತ್ತಾ ಧರಣಿ ಆರಂಭಿಸಿದರು. ಉತ್ತರ ಕರ್ನಾಟಕ, ರೈತರು ಹಾಗೂ ನೀರಾವರಿ ವಿರೋಧಿ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆಗಳನ್ನು ಕೂಗಿದರು.

ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕೆಲವು ಸದಸ್ಯರು ಘೋಷಣೆ ಕೂಗಿದರು, ಕೆಲ ನಿಮಿಷಗಳ ಕಾಲ ನಂತರ ಸಭಾಪತಿ ಪ್ರತಾಪಚಂದ್ರಶೆಟ್ಟಿ 12 ಗಂಟೆವರೆಗೆ ಕಲಾಪ ಮುಂದೂಡಿದರು. ಮಧ್ಯಾಹ್ನ 12.15ಕ್ಕೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಸಭಾಪತಿಗಳ ಮುಂದೆ ಬಂದು ಘೋಷಣೆ ಕೂಗುತ್ತಾ ಧರಣೆ ಮುಂದುವರೆಸಿದರು.

ನಂತರ ಕಾನೂನು ಸಚಿವ ಕೃಷ್ಣ ಬೈರೇಗೌಡ ಅವರು, ಕೆಳಮನೆಯಲ್ಲಿ ಅಂಗೀಕೃತವಾಗಿರುವ ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) (ತಿದ್ದುಪಡಿ) ವಿಧೇಯಕ 2018 ಮಂಡಿಸಿದರೆ, ಮುಖ್ಯಂತ್ರಿ ಕುಮಾರಸ್ವಾಮಿಯವರು ಕೆಳಮನೆಯಲ್ಲಿ ಅಂಗೀಕಾರವಾಗಿರುವ ಕರ್ನಾಟಕ ಸಿವಿಲ್ ಸೇವೆಗಳ (ನೇಮಕಾತಿ ಸಮಯದಲ್ಲಿ ಅಭ್ಯರ್ಥಿಗಳ ಆಯ್ಕೆ ವಿಧಾನ) ವಿಧೇಯಕ-2018 ಮಂಡಿಸಿ, ಧ್ವನಿ ಮತದಿಂದ ಒಪ್ಪಿಗೆ ಪಡೆದರು. ನಂತರ ಸಭಾಪತಿಗಳು ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಕ್ಷಣಾ, ಭದ್ರತಾ ಒಪ್ಪಂದ ಬಲವರ್ಧನೆ: ಭಾರತ- ಜರ್ಮನಿ ಮಹತ್ವದ ಕ್ರಮಗಳ ಘೋಷಣೆ!

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

SCROLL FOR NEXT