ಸಂಗ್ರಹ ಚಿತ್ರ 
ರಾಜ್ಯ

ತೀವ್ರ ಗದ್ದಲದ ನಡುವೆಯೇ ಚರ್ಚೆಗಳಿಲ್ಲದೆ ಮಸೂದೆಗಳು ಅಂಗೀಕಾರ

ಉತ್ತರ ಕರ್ನಾಟಕದ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ಶುಕ್ರವಾರವೂ ಮುಂದುವರೆಸಿದ ಧರಣಿ, ಘೋಷಣೆಗಳ ನಡುವೆಯೇ ಸರ್ಕಾರ ಲಿಖಿತ ಉತ್ತರಗಳ ಸಲ್ಲಿಕೆ, ವಿವಿಧ ವಿಧೇಯಕಗಳನ್ನು ಮಂಡಿಸಿ ಯಾವುದೇ ಚರ್ಚೆಗಳಿಲ್ಲದೆಯೇ ಒಪ್ಪಿಗೆ ಪಡೆಯಿತು...

ಬೆಳಗಾವಿ: ಉತ್ತರ ಕರ್ನಾಟಕದ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಅವಕಾಶ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ಶುಕ್ರವಾರವೂ ಮುಂದುವರೆಸಿದ ಧರಣಿ, ಘೋಷಣೆಗಳ ನಡುವೆಯೇ ಸರ್ಕಾರ ಲಿಖಿತ ಉತ್ತರಗಳ ಸಲ್ಲಿಕೆ, ವಿವಿಧ ವಿಧೇಯಕಗಳನ್ನು ಮಂಡಿಸಿ ಯಾವುದೇ ಚರ್ಚೆಗಳಿಲ್ಲದೆಯೇ ಒಪ್ಪಿಗೆ ಪಡೆಯಿತು.

ಕಲಾಪ ಆರಂಭವಾಗುತ್ತಿದ್ದಂತೆಯೇ ಬಿಜೆಪಿ ಸದಸ್ಯರು ಸಭಾಪತಿಗಳ ಎದುರು ನಿಂತು ಘೋಷಣೆ ಕೂಗುತ್ತಾ ಧರಣಿ ಆರಂಭಿಸಿದರು. ಉತ್ತರ ಕರ್ನಾಟಕ, ರೈತರು ಹಾಗೂ ನೀರಾವರಿ ವಿರೋಧಿ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆಗಳನ್ನು ಕೂಗಿದರು.

ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕೆಲವು ಸದಸ್ಯರು ಘೋಷಣೆ ಕೂಗಿದರು, ಕೆಲ ನಿಮಿಷಗಳ ಕಾಲ ನಂತರ ಸಭಾಪತಿ ಪ್ರತಾಪಚಂದ್ರಶೆಟ್ಟಿ 12 ಗಂಟೆವರೆಗೆ ಕಲಾಪ ಮುಂದೂಡಿದರು. ಮಧ್ಯಾಹ್ನ 12.15ಕ್ಕೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಸಭಾಪತಿಗಳ ಮುಂದೆ ಬಂದು ಘೋಷಣೆ ಕೂಗುತ್ತಾ ಧರಣೆ ಮುಂದುವರೆಸಿದರು.

ನಂತರ ಕಾನೂನು ಸಚಿವ ಕೃಷ್ಣ ಬೈರೇಗೌಡ ಅವರು, ಕೆಳಮನೆಯಲ್ಲಿ ಅಂಗೀಕೃತವಾಗಿರುವ ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ) (ತಿದ್ದುಪಡಿ) ವಿಧೇಯಕ 2018 ಮಂಡಿಸಿದರೆ, ಮುಖ್ಯಂತ್ರಿ ಕುಮಾರಸ್ವಾಮಿಯವರು ಕೆಳಮನೆಯಲ್ಲಿ ಅಂಗೀಕಾರವಾಗಿರುವ ಕರ್ನಾಟಕ ಸಿವಿಲ್ ಸೇವೆಗಳ (ನೇಮಕಾತಿ ಸಮಯದಲ್ಲಿ ಅಭ್ಯರ್ಥಿಗಳ ಆಯ್ಕೆ ವಿಧಾನ) ವಿಧೇಯಕ-2018 ಮಂಡಿಸಿ, ಧ್ವನಿ ಮತದಿಂದ ಒಪ್ಪಿಗೆ ಪಡೆದರು. ನಂತರ ಸಭಾಪತಿಗಳು ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT