ಪ್ರಕಾಶ್ ಹಾಗೂ ಕುಮಾರಸ್ವಾಮಿ 
ರಾಜ್ಯ

ಜೆಡಿಎಸ್ ಮುಖಂಡನ ಹಂತಕರನ್ನು 'ಶೂಟೌಟ್ ಮಾಡಿ' ಎಂದಿದ್ದಕ್ಕೆ ಸಿಎಂ ಕೊಟ್ಟ ಸ್ಪಷ್ಟನೆ ಹೀಗಿತ್ತು!

ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಜೆಡಿಎಸ್ ಮುಖಂಡ ತೊಪ್ಪನಹಳ್ಳಿ ಪ್ರಕಾಶ್ ಅವರನ್ನು ಇಂದು ಹಾಡುಹಗಲೇ ಬರ್ಬರವಾಗಿ ಕೊಲೆ ಮಾಡಿರುವ ಪ್ರಕರಣ ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರು: ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಜೆಡಿಎಸ್ ಮುಖಂಡ ತೊಪ್ಪನಹಳ್ಳಿ ಪ್ರಕಾಶ್ ಅವರನ್ನು ಇಂದು ಹಾಡುಹಗಲೇ ಬರ್ಬರವಾಗಿ ಕೊಲೆ ಮಾಡಿರುವ ಪ್ರಕರಣ ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ಹತ್ಯೆಯ ಆರೋಪಿಗಳನ್ನು "ಶೂಟೋಉಟ್ ಮಾಡಿ, ತೊಂದರೆ ಇಲ್ಲ" ಎಂದು ಪೋಲೀಸರಿಗೆ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದದ್ದು ಈಗ ಮಾದ್ಯಮಗಳಲ್ಲಿ ಭಾರೀ ಸದ್ದು ಮಾಡಿದೆ.
ಮಾದ್ಯಮದಲ್ಲಿ ತನ್ನ ಹೇಳಿಕೆ ಬಿತ್ತರವಾಗುತ್ತಲೇ ಎಚ್ಚೆತ್ತ ಮುಖ್ಯಮಂತ್ರಿಗಳುತಕ್ಷಣ ತಮ್ಮ ಹೇಳಿಕೆ ಕುರಿತು ಸ್ಪಷ್ಟೀಕರಣ ಕೊಟ್ಟಿದ್ದಾರೆ.
"ಮದ್ದೂರಿನಲ್ಲಿ ಇಂದು ಹಾಢಗಲೇ ಒಬ್ಬ ಒಳ್ಳೆ ವ್ಯಕ್ತಿಯ ಕೊಲೆ ನಡೆದಿದೆ. ಕೊಲೆಯಾದ ಪ್ರಕಾಶ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದವರು.ಹೀಗಾಗಿ ಇಂತಹಾ ಘಟನೆ ಮರುಕಳಿಸಬಾರದು ಎಂದು ಪೋಲೀಸರಿಗೆ ಹೇಳುವ ಭರದಲ್ಲಿ ಭಾವಾವೇಶದಿಂದ ನಾನು ಶೂಟೌಟ್ ಮಾಡುವುದಕ್ಕೆ ಹೇಳಿದ್ದೆ.. ಇದು ನನ್ನ ಆ ಕ್ಷಣದ ಭಾವನೆಯಾಗಿತ್ತೇ ಹೊರತು ಆದೇಶವಾಗಿಲ್ಲ" ಎಂದಿದ್ದಾರೆ.
"ರಾಜ್ಯದಲ್ಲಿ ಮುಂದೆ ಇಂತಹಾ ಘಟನೆ ನಡೆಯಬಾರದು. ಈ ಸಂಬಂಧ ಪೋಲೀಸರು ಎಚ್ಚರ ವಹಿಸಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು" ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

SCROLL FOR NEXT