ಸಂಗ್ರಹ ಚಿತ್ರ 
ರಾಜ್ಯ

ಹೃದಯ ವಿದ್ರಾವಕ ಘಟನೆ: ಸೆಲ್ಫಿ ಕ್ರೇಜ್‌ನಲ್ಲಿ ದಂಪತಿ: ಸಮುದ್ರದಲ್ಲಿ ಕೊಚ್ಚಿ ಹೋದ ಮಗು!

ಬೆಂಗಳೂರಿನ ಬನಶಂಕರಿಯ ದಂಪತಿಗಳು ಇಬ್ಬರು ಮಕ್ಕಳೊಂದಿಗೆ ಮಂಗಳೂರಿನ ಉಳ್ಳಾಲದ ಸೋಮೇಶ್ವರ ಬೀಚ್ಗೆ ತೆರಳಿದ್ದು ಈ ವೇಳೆ ದಂಪತಿಯ ಸೆಲ್ಫಿ ಕ್ರೇಜ್...

ಮಂಗಳೂರು: ಬೆಂಗಳೂರಿನ ಬನಶಂಕರಿಯ ದಂಪತಿಗಳು ಇಬ್ಬರು ಮಕ್ಕಳೊಂದಿಗೆ ಮಂಗಳೂರಿನ ಉಳ್ಳಾಲದ ಸೋಮೇಶ್ವರ ಬೀಚ್ಗೆ ತೆರಳಿದ್ದು ಈ ವೇಳೆ ದಂಪತಿಯ ಸೆಲ್ಫಿ ಕ್ರೇಜ್ ನಿಂದಾಗಿ ಮಗು ಸಮುದ್ರದಲ್ಲಿ ಕೊಚ್ಚಿ ಹೋಗಿರುವ ದಾರುಣ ಘಟನೆ ನಡೆದಿದೆ.
4 ವರ್ಷದ ಮೈತ್ರಿ ಕೇದ್ಕಾರ್ ಸಮುದ್ರ ಪಾಲಾದ ಮಗು ಎಂದು ತಿಳಿದುಬಂದಿದೆ. ಚಿಂತಾಮಣಿ ಹಾಗೂ ಶ್ರದ್ಧಾ 6 ವರ್ಷದ ಗಾರ್ಗಿ ಹಾಗೂ ಮೈತ್ರಿ ಜೊತೆ ಪ್ರವಾಸಕ್ಕೆ ತೆರಳಿದ್ದರು.
ಉಳ್ಳಾಲದ ಸೋಮೇಶ್ವರ ಬೀಚ್ ನಲ್ಲಿ ಮಕ್ಕಳೊಂದಿಗೆ ಇಳಿದು ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಈ ವೇಳೆ ರಕ್ಕಸ ಅಲೆಗಳು ಬಂದಿದ್ದರಿಂದ ಎಲ್ಲರೂ ಕಾಲು ಜಾರಿ ನೀರಿನಲ್ಲಿ ಮುಳುಗಿದ್ದಾರೆ. ಈ ವೇಳೆ ಈಜು ರಕ್ಷಕ ಮೋಹನ್ ಎಂಬುವರು ಚಿಂತಾಮಣಿ-ಶ್ರದ್ಧಾ ಹಾಗೂ ಗಾರ್ಗಿಯನ್ನು ರಕ್ಷಿಸಿದ್ದಾರೆ. ಆದರೆ ಮೈತ್ರಿ ರಕ್ಕದ ಅಲೆಗಳ ಮುಂದೆ ಮರೆಯಾಗಿದ್ದಾಳೆ.
ಸದ್ಯ ಎಲ್ಲರಿಗೂ ಕೇದ್ರಾರ್ಗೆ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೂವರು ಪ್ರಾಣಾಪಾಯದಿಂದ ಬದುಕುಳಿದಿದ್ದಾರೆ. ಆದರೆ ಮೈತ್ರಿ ಮಾತ್ರ ಸಮುದ್ರಪಾಲಾಗಿದ್ದಾಳೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Assam: ಕಾಂಗ್ರೆಸ್ ನಿಂದ ಪಾಕ್ ಉಗ್ರರಿಗೆ ಬೆಂಬಲ, ನುಸುಳುಕೋರರ ರಕ್ಷಣೆ: ಪ್ರಧಾನಿ ಮೋದಿ ಆರೋಪ! Video

ಸೀಟು ಹಂಚಿಕೆಗೂ ಮುನ್ನ ಬಿಹಾರದಲ್ಲಿ ಇಂಡಿ ಕೂಟಕ್ಕೆ ಏನಾಯ್ತು: ಎಲ್ಲಾ 243 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುವುದಾಗಿ ಹೇಳಿದ ತೇಜಸ್ವಿ!

J-K terrorists shift: ಸ್ಥಳೀಯರಿಂದ ಸಿಗದ ಬೆಂಬಲ, ಅರಣ್ಯ 'ಬಂಕರ್' ಗಳಿಗೆ ಉಗ್ರರ ಸ್ಥಳಾಂತರ! ಭಾರತೀಯ ಸೇನೆಗೆ ಹೊಸ ಸವಾಲು

'ಅಧಿಕಾರದ ಆಸೆಯಿಂದ ಬಂದಿಲ್ಲ.. 6 ತಿಂಗಳಿಗಿಂತ ಹೆಚ್ಚು ದಿನ ಇರಲ್ಲ': ನೇಪಾಳ ನೂತನ ಪ್ರಧಾನಿ Sushila Karki

ರಾಹುಲ್ ವಿರುದ್ಧ 'ಕಿರುಚುವ' ಬದಲು ತನಿಖೆಗೆ ಆದೇಶಿಸಬೇಕಿತ್ತು: 'ಮತ ಕಳ್ಳತನ' ಆರೋಪದ ಬಗ್ಗೆ ಮಾಜಿ ಸಿಇಸಿ

SCROLL FOR NEXT