ಸಂಜಯ್ ಸಹಾಯ್ 
ರಾಜ್ಯ

ಬೆಂಗಳೂರು: 2ನೇ ಬಾರಿಗೆ ಹಿರಿಯ ಐಪಿಎಸ್ ಅಧಿಕಾರಿಯ ಮೊಬೈಲ್ ಕಳ್ಳತನ

ರಾಜ್ಯದ ಹಿರಿಯ ಐಪಿಎಸ್‌ ಅಧಿಕಾರಿ ಸಂಜಯ್‌ ಸಹಾಯ್‌ ಅವರು ದರೋಡೆಗೆ ಒಳಗಾಗಿದ್ದಾರೆ. ಎಚ್‌ಎಸ್‌ಆರ್‌ ಲೇಔಟ್‌ನಲ್ಲಿ ತಮ್ಮ ಮನೆ ಬಳಿ ಗುರುವಾರ ರಾತ್ರಿ 8.45 ರ ವೇಳೆಗೆ...

ಬೆಂಗಳೂರು: ರಾಜ್ಯದ ಹಿರಿಯ ಐಪಿಎಸ್‌ ಅಧಿಕಾರಿ ಸಂಜಯ್‌ ಸಹಾಯ್‌ ಅವರು ದರೋಡೆಗೆ ಒಳಗಾಗಿದ್ದಾರೆ.
ಎಚ್‌ಎಸ್‌ಆರ್‌ ಲೇಔಟ್‌ನಲ್ಲಿ ತಮ್ಮ ಮನೆ ಬಳಿ ಗುರುವಾರ ರಾತ್ರಿ8.45 ರ ವೇಳೆಗೆ ವಾಕಿಂಗ್‌ ಮಾಡುತ್ತಿದ್ದ, ರಾಜ್ಯ ಕಂಪ್ಯೂಟರ್‌ ವಿಂಗ್‌ನ ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ ಸಂಜಯ್‌ ಸಹಾಯ್‌ ಅವರ ಮೊಬೈಲ್‌ಅನ್ನು ಕಳ್ಳರು ಕಿತ್ತೊಯ್ದಿದ್ದಾರೆ.
ಹೆಲ್ಮೆಟ್‌ ಧರಿಸಿದ್ದ ಇಬ್ಬರ ಪೈಕಿ ಒಬ್ಬ , ಸಂಜಯ್‌ ಸಹಾಯ್‌ ಅವರ ಬಳಿ ನಡೆದುಕೊಂಡು ಬಂದು ಮೊಬೈಲ್‌ ಕಿತ್ತುಕೊಂಡು ಓಡಲು ಆರಂಭಿಸಿದ್ದ. ಸಂಜಯ್‌ ಸಹಾಯ್‌ ಆತನನ್ನು ಸ್ವಲ್ಪ ದೂರ ಅಟ್ಟಿಸಿಕೊಂಡು ಹೋಗಿದ್ದಾರೆ. ಸಮೀಪದಲ್ಲೇ ಬೈಕ್‌ನಲ್ಲಿ ಬಂದಿದ್ದ ಇನ್ನೊಬ್ಬ ಸಹಚರ ಈತನನ್ನು ಬೈಕ್‌ನಲ್ಲಿ ಕೂರಿಸಿಕೊಂಡು ತೆರಳಿದ್ದಾನೆ. 
ನಂತರ ಸಂಜಯ್‌ ಸಹಾಯ್‌ ಅವರು ಎಚ್‌ಎಸ್‌ಆರ್‌ ಲೇಔಟ್‌ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಥಳೀಯ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ ನಡೆಸಿದ್ದಾರೆ. 
ಸಂಜಯ್‌ ಸಹಾಯ್‌ ಅವರು 2016ರಲ್ಲಿ ಮಾನವ ಹಕ್ಕುಗಳು ಮತ್ತು ಕುಂದು ಕೊರತೆ ವಿಭಾಗದ ಎಡಿಜಿಪಿ ಆಗಿದ್ದ ವೇಳೆಯೂ ಕಳ್ಳರು ಅವರ ಮೊಬೈಲ್‌ ಫೋನ್‌ ದೋಚಿದ್ದರು. 2016 ರಲ್ಲಿ  ಬೈಕ್ ನಲ್ಲಿ ಬಂದ ಇಬ್ಬರು ಸಂಜಯ್ ಸಹಾಯ್ ಅವರ ಮೊಬೈಲ್ ಕದ್ದುಕೊಂಡು ಹೋಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹದಲ್ಲಿ 19 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರದಲ್ಲಿ ಕಟ್ಟೆಚ್ಚರ!

Chandra Grahan 2026: ವರ್ಷದ ಕೊನೆಯ ಸುದೀರ್ಘ ಚಂದ್ರಗ್ರಹಣ; ಭಾರತದಲ್ಲಿ ಸೂತಕ ಕಾಲ ಇಲ್ಲ, ಯಾಕೆ ಗೊತ್ತ?

ಲಾಲ್ ಬಾಗ್-ಕಬ್ಬನ್ ಪಾರ್ಕ್ ನ 22 ಎಕರೆ ಜಾಗ ಪರಭಾರೆ?, ಬೆಂಗಳೂರಿನ ಪಾರ್ಕ್‌ಗಳಿಗೆ ಹೊಸ ಕಾಯ್ದೆ ಕಂಟಕ?; ರಾಜ್ಯಪಾಲರಿಗೆ ಸಂಸದ Tejasvi Surya ಪತ್ರ

2ನೇ ಟೆಸ್ಟ್ ಮೇಲೆ ಭಾರತ ಬಿಗಿ ಹಿಡಿತ: ಮಳೆಕಾಟದಿಂದ 4ನೇ ದಿನದಾಟ ಬೇಗನೇ ಅಂತ್ಯ

Toxic: ಭರ್ಜರಿ ಓಪನಿಂಗ್, ಮೊದಲ ದಿನವೇ ಪಠಾಣ್, ಅನಿಮಲ್ ದಾಖಲೆ ಉಡೀಸ್, ಸಂಜೆ ವೇಳೆಗೆ 70 ಕೋಟಿ ಗೂ ಅಧಿಕ ಕಲೆಕ್ಷನ್!