ಮಂಡ್ಯ: ಮದ್ದೂರು ತಾಲೂಕು ತೊಪ್ಪನಹಳ್ಳಿ ಜೋಡಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿದಾರನಾಗಿದ್ದ ಜೆಡಿಎಸ್ ಮುಖಂಡ ಪ್ರಕಾಶ್ ಹತ್ಯೆ ನಂತರ ಮದ್ದೂರಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕ ಡಿ.ಶಿವಪ್ರಕಾಶ್, ಮಳವಳ್ಳಿ ಡಿವೈಎಸ್ಪಿ ಶೈಲೇಂದ್ರ, ಸಿಪಿಐಗಳಾದ ಎನ್. ವಿ.ಮಹೇಶ್, ನವೀನ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಘಟನೆ ಹಿನ್ನೆಲೆಯಲ್ಲಿ ಮದ್ದೂರು ಹಾಗೂ ತೊಪ್ಪನಹಳ್ಳಿ ಗ್ರಾಮದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.
ಇನ್ನೂ ಶವವಿರಿಸಿಕೊಂಡು ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಕುಮಾರ ಸ್ವಾಮಿ ಭೇಟಿ ನೀಡಬೇಕು, ಇಲ್ಲದಿದ್ದರೇ ಮರಣೋತ್ತರ ಪರೀಕ್ಷೆಗೆ ಅವಕಾಶ ಕೊಡುವುದಿಲ್ಲ ಎಂದು ಬಿಗಿ ಪಟ್ಟು ಹಿಡಿದಿದ್ದರು, ಈ ವೇಳೆ ಪೊಲೀಸರು ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿತ್ತು. ಮುಖ್ಯಮಂತ್ರಿ ಕುಮಾರ ಸ್ವಾಮಿ ಇಂದು ಗ್ರಾಮಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ.
2016ರ ಡಿಸೆಂಬರ್ 25ರಂದು ತೊಪ್ಪನಹಳ್ಳಿ ಗ್ರಾಮದಲ್ಲಿ ನಡೆದ ಜೆಡಿ ಎಸ್ ಕಾರ್ಯಕರ್ತರ ಜೋಡಿ ಕೊಲೆ ಪ್ರಕರಣಕ್ಕೆ ಪ್ರಕಾಶ್ ಪ್ರಮುಖ ಸಾಕ್ಷಿದಾರರಾಗಿದ್ದರು. ಹೆಲ್ಮೆಟ್ ಧರಿಸಿ ಬೈಕ್ ನಲ್ಲಿ ಬಂದ ನಾಲ್ಕೈದು ಜನರ ಗುಂಪು ಪ್ರಕಾಶ್ ಕುಳಿತಿದ್ದ ಕಾರಿನಲ್ಲೇ ಭೀಕರವಾಗಿ ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos