ಮುಖ್ಯಮಂತ್ರಿ ಕುಮಾರಸ್ವಾಮಿ 
ರಾಜ್ಯ

'ಶೂಟೌಟ್ ಮಾಡಿ': ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಭಾರೀ ವಿರೋಧ

ಜೆಡಿಎಸ್ ಕಾರ್ಯಕರ್ತ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ನೀಡಿದ್ದ ಆರೋಪಿಗಳ ಶೂಟೌಟ್ ಮಾಡಿ ಹೇಳಿಕೆ ಇದೀಗ ವಿವಾದದ ಸ್ವರೂಪ ಪಡೆದುಕೊಂಡಿದೆ...

ಬೆಂಗಳೂರು: ಜೆಡಿಎಸ್ ಕಾರ್ಯಕರ್ತ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ನೀಡಿದ್ದ ಆರೋಪಿಗಳ ಶೂಟೌಟ್ ಮಾಡಿ ಹೇಳಿಕೆ ಇದೀಗ ವಿವಾದದ ಸ್ವರೂಪ ಪಡೆದುಕೊಂಡಿದೆ. 
ಕುಮಾರಸ್ವಾಮಿಯ ಹೇಳಿಕೆಗೆ ಬಿಜೆಪಿ ಸೇರಿ ಹಲವು ವಲಯಗಳಿಂದ ತೀವ್ರ ಆಕ್ರೋಶಗಳು ವ್ಯಕ್ತವಾಗತೊಡಗಿದೆ. ಈ ಮಧ್ಯೆಯೇ, ಅದು ಉದ್ವೇಗದಲ್ಲಿ ನೀಡಿದ ಹೇಳಿಕೆ. ಸಿಎಂ ಆಗಿ ನೀಡಿದ ಆದೇಶ ಅಲ್ಲ ಎಂದು ಕುಮಾರಸ್ವಾಮಿಯವರು ಸಮರ್ಥಿಸಿಕೊಂಡಿದ್ದಾರೆ. 
ಕುಮಾರಸ್ವಾಮಿಯವರ ಹೇಳಿಕೆಗೆ ರಾಜ್ಯ ಬಿಜೆಪಿ ತೀವ್ರ ವಿರೋಧ ವಿರೋಧ ವ್ಯಕ್ತಪಡಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಮಾತನಾಡಿ, ಪಕ್ಷದ ಕಾರ್ಯಕರ್ತ ಎನ್ನುವ ವ್ಯಾಮೋಹದಲ್ಲಿ ಕುಮಾರಸ್ವಾಮಿಯವರು ತಾವೊಬ್ಬ ರಾಜ್ಯದ ಮುಖ್ಯಮಂತ್ರಿ ಎನ್ನುವುದನ್ನೇ ಮರೆತಿದ್ದಾರೆ. ಮುಖ್ಯಮಂತ್ರಿಗಳೇ ಈ ರೀತಿ ಹೇಳಿಕೆ ನೀಡಿದರೆ, ಕಾನೂನು ಸುವ್ಯವಸ್ಥೆ ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದ್ದಾರೆ. 
ಇದರಂತೆ ಬಿಜೆಪಿ ಮುಖಂಡ ಶ್ರೀರಾಮುಲು ಪ್ರತಿಕ್ರಿಯೆ ನೀಡಿ, ಹಿಂದೂ ಕಾರ್ಯಕರ್ತರು ಕೊಲೆಗೀಡಾದಾಗ ಕುಮಾರಸ್ವಾಮಿ ಬಾಯಲ್ಲಿ ಈ ರೀತಿಯ ಮಾತು ಏಕೆ ಬರಲಿಲ್ಲ ಎಂದು ಪ್ರಶ್ನಿಸಿದರು. 
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತನಾಡಿ, ಇದು ವೈಯಕ್ತಿಕ ಹೇಳಿಕೆ ಎನ್ನುವುದೇ ಆದರೆ, ಕುಮಾರಸ್ವಾಮಿ ಬೇಕೆ, ಮುಖ್ಯಮಂತ್ರಿ ಕುಮಾರಸ್ವಾಮಿ ಬೇರೆನಾ ಎಂದು ಪ್ರಶ್ನಿಸಿದ್ದಾರೆ. 
ಮಾಜಿ ಎಸಿಪಿ ಬಿ.ಕೆ.ಶಿವರಾಮ್ ಅವರು ಮಾತನಾಡಿ, ಇಂತಹ ನಿರ್ದೇಶನಗಳನ್ನು ಆದೇಶವೆಂದು ತೆಗೆದುಕೊಳ್ಳುವುದಿಲ್ಲ. ಒಬ್ಬ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿಯವರು ಪೊಲೀಸ್ ಅಧಿಕಾರಿಗಳಿ ಈ ರೀತಿಯ ನಿರ್ದೇಶನಗಳನ್ನು ನೀಡಬಾರದು. ಒಂದು ವೇಳೆ ಯಾರಾದರೂ ಈ ನಿರ್ದೇಶನವನ್ನು ಪಾಲಿಸಿದ್ದೇ ಆದರೆ, ಅವರ ವಿರುದ್ದ ಕೊಲೆ ಪ್ರಕರಣ ದಾಖಲಾಗುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT