ಕೆ.ಎಸ್‌. ಭಗವಾನ್ 
ರಾಜ್ಯ

ಶ್ರೀರಾಮ, ಮಹಾತ್ಮ ಗಾಂಧಿಗೆ ಅವಹೇಳನ: ಪ್ರೊ. ಭಗವಾನ್ ವಿರುದ್ಧ ದೂರು ದಾಖಲು

ಸಾಹಿತಿ, ವಿಮರ್ಶಕ ಪ್ರೊ. ಕೆ.ಎಸ್‌. ಭಗವಾನ್ "ರಾಮಮಂದಿರ ಏಕೆ ಬೇಡ" ಎಂಬ ಪುಸ್ತಕ ಇಂದು ಬಿಡುಗಡೆಯಾಗಿದ್ದು ಪುಸ್ತಕದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವಂತಹ ಅಂಶಗಳಿದೆ ಎಂದು......

ಮಡಿಕೇರಿ: ಸಾಹಿತಿ, ವಿಮರ್ಶಕ ಪ್ರೊ. ಕೆ.ಎಸ್‌. ಭಗವಾನ್ "ರಾಮಮಂದಿರ ಏಕೆ ಬೇಡ" ಎಂಬ ಪುಸ್ತಕ ಇಂದು ಬಿಡುಗಡೆಯಾಗಿದ್ದು ಪುಸ್ತಕದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವಂತಹ ಅಂಶಗಳಿದೆ ಎಂದು ಆರೋಪಿಸಿ ವಕೀಲ ಕೃಷ್ಣಮೂರ್ತಿ ಎನ್ನುವವರು ಮಡಿಕೇರಿ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಭಗವಾನ್ ವಿವಾದಾತ್ಮಕ ಪುಸ್ತಕ ಬರೆದಿದ್ದಾರೆ "ರಾಮ ಮಂದಿರ ಏಕೆ ಬೇಡ" ಎಂಬ ಪುಸ್ತಕದಲ್ಲಿ ರಾಮ, ಕೃಷ್ಣ, ಚಾಮುಂಡಿ ಸೇರಿ ಹಲವು ದೇವರನ್ನು ಅಪಮಾನಿಸಿ ಹಿಂದೂಗಳ ಭಾವನೆಗಳಿಗೆ ಘಾಸಿ ಮಾಡಿದ್ದಾರೆ ಎಂದು ಆರೋಪಿಸಿರುವ ಕೃಷ್ಣಮೂರ್ತಿ ಭಗವಾನ್ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.
ರಾಮ, ಸೀತೆಯರನ್ನು ಮಾತ್ರವಲ್ಲದೆ ಮಹಾತ್ಮಾ ಗಾಂಧಿ ಬಗ್ಗೆಯೂ ಪುಸ್ತಕದಲ್ಲಿ ಕೀಳಾಗಿ ಬರೆಯಲಾಗಿದೆ.ದೇವರೆಂದು ಪೂಜಿಸುವ ಸೀತೆ, ರಾಮರು ಮದ್ಯಪಾನ ಮಾಡುತ್ತಿದ್ದರು.ರಾಮ ಏಕ ಪತ್ನಿ ವ್ರತಸ್ಥ  ಎಂಬುದು ಸುಳ್ಳು, ರಾಮ ವನಿತೆಯರ ಜೊತೆ ಕುಡಿದು ನೃತ್ಯ ಮಾಡಿ ಅವರನ್ನು ಸಂತೋಷ ಪಡಿಸುತ್ತಿದ್ದ ಎಂದೆಲ್ಲಾ ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ಮಹಾತ್ಮಾ ಗಾಂಧಿ ಬಗ್ಗೆ ಸಹ ಅವಹೇಳಕಾರಿಯಾಗಿ ಬರೆಯಲಾಗಿದೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT