ಇಂದು ಉಡುಪಿಗೆ ರಾಷ್ಟ್ರಪತಿ ಕೋವಿಂದ್ 
ರಾಜ್ಯ

ಇಂದು ಉಡುಪಿಗೆ ರಾಷ್ಟ್ರಪತಿ ಕೋವಿಂದ್, ಕೃಷ್ಣ ಭಕ್ತರಿಗೆ ನಿರ್ಬಂಧ

ಇಂದು(ಡಿಸೆಂಬರ್ 27) ರಾಷ್ಟ್ರಪತಿ ರಾಮನಾಥ ಕೋವಿಂದ್ ಉಡುಪಿಗೆ ಭೇಟಿ ನೀಡಲಿದ್ದಾರೆ.ಪೇಜಾವರ ಶ್ರೀವಿಶ್ವೇಶತೀರ್ಥ ಶ್ರೀಪಾದರು ಸನ್ಯಾಸ ಸ್ವೀಕರಿಸಿ 80 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ.....

ಉಡುಪಿ: ಇಂದು(ಡಿಸೆಂಬರ್ 27) ರಾಷ್ಟ್ರಪತಿ ರಾಮನಾಥ ಕೋವಿಂದ್ ಉಡುಪಿಗೆ ಭೇಟಿ ನೀಡಲಿದ್ದಾರೆ.ಪೇಜಾವರ ಶ್ರೀವಿಶ್ವೇಶತೀರ್ಥ ಶ್ರೀಪಾದರು ಸನ್ಯಾಸ ಸ್ವೀಕರಿಸಿ 80 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಕೋವಿಂದ್ ಭಾಗವಹಿಸಲಿದ್ದಾರೆ.
ರಾಷ್ಟ್ರಪತಿಗಳ ಭೇಟಿಯ ಹಿನ್ನೆಲೆಯಲ್ಲಿ ಮಠ ಹಾಗೂ ಸುತ್ತಮುತ್ತಲ ಪ್ರದೇಶ, ನಗರದಲ್ಲಿ ವ್ಯಾಪಕ ಭದ್ರತೆ ಕೈಗೊಳ್ಳಳಾಗಿದೆ.
ಶ್ರೀಕೃಷ್ಣ ಮಠದ ರಾಜಾಂಗಣದ ಬದಲು ರಥಬೀದಿಯಲ್ಲಿರುವ ಪೇಜಾವರ ಮಠದ ಎದುರು ನಿರ್ಮಿಸಲಾಗುವ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಪೇಜಾವರ ಶ್ರೀಗಳು ಸನ್ಯಾಸ ಸ್ವೀಕರಿಸಿ 80 ವರ್ಷವಾದ ಹಿನ್ನೆಲೆ ಅವರ ಶಿಷ್ಯೆಯಾಗಿರುವ ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ಉಡುಪಿಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದಾರೆ.
ಆದಿ ಉಡುಪಿ  ಹೆಲಿ ಪ್ಯಾಡ್‌ಗೆ ಮಧ್ಯಾಹ್ನ 12ಕ್ಕೆ ರಾಷ್ಟ್ರಪತಿಗಳು ಆಗಮಿಸಲಿದ್ದು  ಬನ್ನಂಜೆಯಲ್ಲಿರುವ ಪ್ರವಾಸಿ ಮಂದಿರದಲ್ಲಿ ಕೆಲ ಸಮಯ ವಿಶ್ರಾಂತಿ ಪಡೆದು ಬಳಿಕ ನೇರವಾಗಿ ಕಾರ್ಯಕ್ರಮ ನಡೆಯುವ ವೇದಿಕೆಗೆ ಆಗಮಿಸಲಿದ್ದಾರೆ.
ಕಾರ್ಯಕ್ರಮದ ಬಳಿಕ  ಶ್ರೀಕೃಷ್ಣ ದರ್ಶನ ಪಡೆಯುವ ರಾಷ್ಟ್ರಪತಿಗಳು ನಂತರ ಪ್ರಸಾದ ಸ್ವೀಕರಿಸಿ  ದೆಹಲಿಗೆ ನಿರ್ಗಮಿಸಲಿದ್ದಾರೆ.
ಭದ್ರತಾ ದೃಷ್ಠಿಯಿಂದ, ಉಡುಪಿಯ ಸಂಸ್ಕೃತ ಕಾಲೇಜು ಪಕ್ಕದ ಗೇಟಿನಿಂದ ಸಂಪೂರ್ಣ ರಥಬೀದಿಯ ಸುತ್ತ ಹಾಗೂ ರಾಜಾಂಗಣದ ಸುತ್ತಮುತ್ತ ಇರುವ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಹಾಗೆಯೇ ತುರ್ತು ನೆಲೆಯಲ್ಲಿ ಉಡುಪಿ ಶ್ರೀಕೃಷ್ಣ ಮಠ, ರಥಬೀದಿಯನ್ನು ಸಂಪರ್ಕಿಸುವ ರಸ್ತೆಗಳಲ್ಲಿ ಬಿದ್ದ ಹೊಂಡ ಮುಚ್ಚಿ, ಪ್ಯಾಚ್‌ ವರ್ಕ್‌, ಡಾಮರೀಕರಣ ಕಾಮಗಾರಿಯನ್ನು ಜಿಲ್ಲಾಡಳಿತ ನಡೆಸಿದೆ.
ಭದ್ರತೆಗಾಗಿ ನಗರದಾದ್ಯಂತ 1,400ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಪ್ರವಾಹದಿಂದ ಬೆಳೆಹಾನಿ: ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8,500 ರೂ ಪರಿಹಾರ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮಳೆ ಹಾನಿಯಿಂದ 52 ಮಂದಿ ಸಾವು; ವಾರಸುದಾರರಿಗೆ ಪರಿಹಾರ ವಿತರಣೆ: ಸಿಎಂ ಸಿದ್ದರಾಮಯ್ಯ

Gaza peace deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು

Rahul Security: ರಾಹುಲ್, ಸೋನಿಯಾ, ಪ್ರಿಯಾಂಕಾ ಜೀವಕ್ಕೆ ಅಪಾಯ; ಭದ್ರತೆ ಹೆಚ್ಚಳಕ್ಕೆ ಕಾಂಗ್ರೆಸ್ ಒತ್ತಾಯ

ನಾನು ಜೋಕರ್ ರೀತಿ ನಿಂತಿದ್ದೆ: ಏಷ್ಯಾಕಪ್ ಟ್ರೋಫಿ ಖಾಸಗಿ ವ್ಯಕ್ತಿಯ ಆಸ್ತಿಯಲ್ಲ; BCCI ಉಪಾಧ್ಯಕ್ಷರ ಪ್ರಶ್ನೆಗೆ ನಖ್ವಿ ತತ್ತರ!

SCROLL FOR NEXT