ಯೋಗಗುರು ಬಾಬಾ ರಾಮ್ ದೇವ್ 
ರಾಜ್ಯ

ರಾಮ ಮಂದಿರಕ್ಕಿಂತ ಆದರ್ಶ ಪಾಲನೆ ದೊಡ್ಡದು, ಜಯಘೋಷ ಕೂಗಿದರೆ ಭಾರತ ವಿಶ್ವಗುರುವಾಗಲ್ಲ,: ರಾಮ್ ದೇವ್

ಭಾರತ್ ಮಾತಾ ಕಿ ಜೈ, ವಂದೇ ಮಾತರಂ - ಇಂತಹಾ ಘೋಷಣೆ ಕೂಗಿದ ಮಾತ್ರಕ್ಕೆ ಭಾರತ ವಿಶ್ವಗುರುವಾಗಲು ಸಾಧ್ಯವಿಲ್ಲ ಎಂದು ಯೋಗಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ.

ವಿಜಯಪುರ: ಭಾರತ್ ಮಾತಾ ಕಿ ಜೈ, ವಂದೇ ಮಾತರಂ - ಇಂತಹಾ ಘೋಷಣೆ ಕೂಗಿದ ಮಾತ್ರಕ್ಕೆ ಭಾರತ ವಿಶ್ವಗುರುವಾಗಲು ಸಾಧ್ಯವಿಲ್ಲ ಎಂದು ಯೋಗಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ.ವಿಜಯಪುರಕ್ಕೆ ಆಗಮಿಸಿದ್ದ ಬಾಬಾ ರಾಮ್ ದೇವ್ ಮಾದ್ಯಮ ಪ್ರತಿನಿಧಿಗಳೊಡನೆ ಮಾತನಾಡಿ "ಯಾವ ರಾಜಕೀಯ ಪಕ್ಷಗ್ಳೂ ಜಾತಿ ಮುಕ್ತ ಭಾರತದ ಸಂಕಲ್ಪ ಮಾಡುತ್ತಿಲ್ಲ.ಕೇವಲ ಜಯಘೋಷ ಕೂಗಿದರೆ ಭಾರತ ವಿಶ್ವಗುರು ಆಗಲ್ಲ, ಅದಕ್ಕೆ ಕರ್ಮಯೋಗ ಬೇಕು. ಜಾತಿ, ಧರ್ಮದ ಹೆಸರಲ್ಲಿ ರಾಜಕೀಯ ಪಕ್ಷಗಳು ವಿಷಬೀಜ ಬಿತ್ತುತ್ತಿದ್ದು ಯಾವ ಕಾರಣಕ್ಕೂ ವ್ಯಸನಮುಕ್ತ, ದಿವ್ಯಭಾರತ ಅವುಗಳ ಆದ್ಯತೆ ಆಗಬೇಕಿದೆ ಎಂದಿದ್ದಾರೆ.
ರಾಮನ ಆದರ್ಶ ಪಾಲನೆ ಮುಖ್ಯ
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಬಾಬಾ ಶ್ರೀರಾಮ, ಹನುಮಂತ, ಪತಂಜಲಿ ಹೀಗೆ ಎಲ್ಲರನ್ನೂ ಒಂದೊಂದು ಜಾತಿಗೆ ಸೀಮಿತಗೊಳಿಸಲಾಗುತ್ತಿದೆ.ಯಾವ ಕಾರಣಕ್ಕೂ ಹೀಗಾಗಬಾರದು. ಶ್ರೀರಾಮನ ಮೂರ್ತಿ, ಮಂದಿರ ನಿರ್ಮಾಣಕ್ಕಿಂತಲೂ ರಾಮನ ಆದರ್ಶ ಪಾಲಿಸುವುದು ಅಗತ್ಯ. ಎಂದಿದ್ದಾರೆ.
ಕರ್ನಾಟಕದಲ್ಲಿ ಭಗವಾನ್ "ರಾಮಮಂದಿರ ಏಕೆ ಬೇಡ" ಎಂಬ ವಿವಾದಾತ್ಮಕ ಪುಸ್ತಕ ಬರೆದು ಶ್ರೀರಾಮನನ್ನು ಅವಮಾನಿಸಿದ ಬಗ್ಗೆ ಮಾತನಾಡಿದ್ದ ರಾಮ್ ದೇವ್ "ನಾವು ನಮ್ಮ ಪೂರ್ವಜರನ್ನು ಹೀಗೆ ಅವಮಾನಿಸುವುದುಆದ್ಯಾತ್ಮಿಕ ಹಾಗೂ ಸಾಮಾಜಿಕ ಮಹಾಪರಾಧವಾಗಲಿದೆ. ಎಂದರು.
ಹಿಂದೂಗಳು, ಮುಸಲ್ಮಾನರು ಒಟ್ಟಾಗಿ ಈ ರಾಷ್ಟ್ರ ನಿರ್ಮಿಸಿದ್ದಾರೆ. ಮಂದಿರ, ಮಸೀದಿಗಳ ಹೆಸರಲ್ಲಿ ಯಾರೂ ತಮ್ಮ ಹೃದಯ ಕಲ್ಲಾಗಿಸಿಕೊಳ್ಳುವುದು ಬೇಡ. ಯಾರೇನೇ ಅಂದರೂ ನಮ್ಮ ಪೂರ್ವಜರು ಒಬ್ಬರೇ.ಯಾವುದೇ ರಾಜಕೀಯ ಪ್ರೇರಣೆಗೆ ಕಿವಿಗೊಡದೆ ದೇಶದ ಏಕತೆ, ಅಖಂಡತೆಯನ್ನು ಕಾಪಾಡಿಕೊಳ್ಳುವತ್ತ ಗಮನಿಸಿ ಎಂದು ಬಾಬಾ ಕರೆ ನೀಡಿದ್ದಾರೆ.
ಜಗತ್ತಿನ ದೊಡ್ಡ ವಿಶ್ವವಿದ್ಯಾನಿಲಯ
ನವದೆಹಲಿಯಲ್ಲಿ ಜಗತ್ತಿನಲ್ಲಿ ಅತಿ ದೊಡ್ಡ ವಿಶ್ವವಿದ್ಯಾನಿಲಯ ಸ್ಥಾಪನೆ ಮಾಡುವ ಗುರಿ ಹೊಂದಲಾಗಿದೆ.ನಳಂದಾ, ತಕ್ಷಶಿಳಾ ಮಾದರಿಯಲ್ಲಿ ವಿವಿ ಸ್ಥಾಪನೆ ಮಾಡಿ ಭಾರತದಲ್ಲಿ ಶೈಲ್ಕ್ಷಣಿಕ ಗತವೈಭವವನ್ನು ಮರಳಿ ತರುವುದಕ್ಕೆ ಸಂಕಲ್ಪಿಸಲಾಗಿದೆ ಎಂದು ಬಾಬಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT