ಯೋಗಗುರು ಬಾಬಾ ರಾಮ್ ದೇವ್ 
ರಾಜ್ಯ

ರಾಮ ಮಂದಿರಕ್ಕಿಂತ ಆದರ್ಶ ಪಾಲನೆ ದೊಡ್ಡದು, ಜಯಘೋಷ ಕೂಗಿದರೆ ಭಾರತ ವಿಶ್ವಗುರುವಾಗಲ್ಲ,: ರಾಮ್ ದೇವ್

ಭಾರತ್ ಮಾತಾ ಕಿ ಜೈ, ವಂದೇ ಮಾತರಂ - ಇಂತಹಾ ಘೋಷಣೆ ಕೂಗಿದ ಮಾತ್ರಕ್ಕೆ ಭಾರತ ವಿಶ್ವಗುರುವಾಗಲು ಸಾಧ್ಯವಿಲ್ಲ ಎಂದು ಯೋಗಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ.

ವಿಜಯಪುರ: ಭಾರತ್ ಮಾತಾ ಕಿ ಜೈ, ವಂದೇ ಮಾತರಂ - ಇಂತಹಾ ಘೋಷಣೆ ಕೂಗಿದ ಮಾತ್ರಕ್ಕೆ ಭಾರತ ವಿಶ್ವಗುರುವಾಗಲು ಸಾಧ್ಯವಿಲ್ಲ ಎಂದು ಯೋಗಗುರು ಬಾಬಾ ರಾಮ್ ದೇವ್ ಹೇಳಿದ್ದಾರೆ.ವಿಜಯಪುರಕ್ಕೆ ಆಗಮಿಸಿದ್ದ ಬಾಬಾ ರಾಮ್ ದೇವ್ ಮಾದ್ಯಮ ಪ್ರತಿನಿಧಿಗಳೊಡನೆ ಮಾತನಾಡಿ "ಯಾವ ರಾಜಕೀಯ ಪಕ್ಷಗ್ಳೂ ಜಾತಿ ಮುಕ್ತ ಭಾರತದ ಸಂಕಲ್ಪ ಮಾಡುತ್ತಿಲ್ಲ.ಕೇವಲ ಜಯಘೋಷ ಕೂಗಿದರೆ ಭಾರತ ವಿಶ್ವಗುರು ಆಗಲ್ಲ, ಅದಕ್ಕೆ ಕರ್ಮಯೋಗ ಬೇಕು. ಜಾತಿ, ಧರ್ಮದ ಹೆಸರಲ್ಲಿ ರಾಜಕೀಯ ಪಕ್ಷಗಳು ವಿಷಬೀಜ ಬಿತ್ತುತ್ತಿದ್ದು ಯಾವ ಕಾರಣಕ್ಕೂ ವ್ಯಸನಮುಕ್ತ, ದಿವ್ಯಭಾರತ ಅವುಗಳ ಆದ್ಯತೆ ಆಗಬೇಕಿದೆ ಎಂದಿದ್ದಾರೆ.
ರಾಮನ ಆದರ್ಶ ಪಾಲನೆ ಮುಖ್ಯ
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಬಾಬಾ ಶ್ರೀರಾಮ, ಹನುಮಂತ, ಪತಂಜಲಿ ಹೀಗೆ ಎಲ್ಲರನ್ನೂ ಒಂದೊಂದು ಜಾತಿಗೆ ಸೀಮಿತಗೊಳಿಸಲಾಗುತ್ತಿದೆ.ಯಾವ ಕಾರಣಕ್ಕೂ ಹೀಗಾಗಬಾರದು. ಶ್ರೀರಾಮನ ಮೂರ್ತಿ, ಮಂದಿರ ನಿರ್ಮಾಣಕ್ಕಿಂತಲೂ ರಾಮನ ಆದರ್ಶ ಪಾಲಿಸುವುದು ಅಗತ್ಯ. ಎಂದಿದ್ದಾರೆ.
ಕರ್ನಾಟಕದಲ್ಲಿ ಭಗವಾನ್ "ರಾಮಮಂದಿರ ಏಕೆ ಬೇಡ" ಎಂಬ ವಿವಾದಾತ್ಮಕ ಪುಸ್ತಕ ಬರೆದು ಶ್ರೀರಾಮನನ್ನು ಅವಮಾನಿಸಿದ ಬಗ್ಗೆ ಮಾತನಾಡಿದ್ದ ರಾಮ್ ದೇವ್ "ನಾವು ನಮ್ಮ ಪೂರ್ವಜರನ್ನು ಹೀಗೆ ಅವಮಾನಿಸುವುದುಆದ್ಯಾತ್ಮಿಕ ಹಾಗೂ ಸಾಮಾಜಿಕ ಮಹಾಪರಾಧವಾಗಲಿದೆ. ಎಂದರು.
ಹಿಂದೂಗಳು, ಮುಸಲ್ಮಾನರು ಒಟ್ಟಾಗಿ ಈ ರಾಷ್ಟ್ರ ನಿರ್ಮಿಸಿದ್ದಾರೆ. ಮಂದಿರ, ಮಸೀದಿಗಳ ಹೆಸರಲ್ಲಿ ಯಾರೂ ತಮ್ಮ ಹೃದಯ ಕಲ್ಲಾಗಿಸಿಕೊಳ್ಳುವುದು ಬೇಡ. ಯಾರೇನೇ ಅಂದರೂ ನಮ್ಮ ಪೂರ್ವಜರು ಒಬ್ಬರೇ.ಯಾವುದೇ ರಾಜಕೀಯ ಪ್ರೇರಣೆಗೆ ಕಿವಿಗೊಡದೆ ದೇಶದ ಏಕತೆ, ಅಖಂಡತೆಯನ್ನು ಕಾಪಾಡಿಕೊಳ್ಳುವತ್ತ ಗಮನಿಸಿ ಎಂದು ಬಾಬಾ ಕರೆ ನೀಡಿದ್ದಾರೆ.
ಜಗತ್ತಿನ ದೊಡ್ಡ ವಿಶ್ವವಿದ್ಯಾನಿಲಯ
ನವದೆಹಲಿಯಲ್ಲಿ ಜಗತ್ತಿನಲ್ಲಿ ಅತಿ ದೊಡ್ಡ ವಿಶ್ವವಿದ್ಯಾನಿಲಯ ಸ್ಥಾಪನೆ ಮಾಡುವ ಗುರಿ ಹೊಂದಲಾಗಿದೆ.ನಳಂದಾ, ತಕ್ಷಶಿಳಾ ಮಾದರಿಯಲ್ಲಿ ವಿವಿ ಸ್ಥಾಪನೆ ಮಾಡಿ ಭಾರತದಲ್ಲಿ ಶೈಲ್ಕ್ಷಣಿಕ ಗತವೈಭವವನ್ನು ಮರಳಿ ತರುವುದಕ್ಕೆ ಸಂಕಲ್ಪಿಸಲಾಗಿದೆ ಎಂದು ಬಾಬಾ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT