ದುರಸ್ಥಿ ಕಾರ್ಯ 
ರಾಜ್ಯ

ಪ್ರಯಾಣಿಕರ ಗಮನಕ್ಕೆ: ನಾಳೆಯೂ ಎಂಜಿ ರಸ್ತೆ - ಇಂದಿರಾನಗರ ಮಧ್ಯೆ ಮೆಟ್ರೋ ಸಂಚಾರ ಇಲ್ಲ

ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿಯ ಪಿಲ್ಲರ್​ ದುರಸ್ತಿ ಕಾಮಗಾರಿ ಇನ್ನೂ ಮುಗಿದಿಲ್ಲ. ಹೀಗಾಗಿ ನಾಳೆಯೂ...

ಬೆಂಗಳೂರು: ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿಯ ಪಿಲ್ಲರ್​ ದುರಸ್ತಿ ಕಾಮಗಾರಿ ಇನ್ನೂ ಮುಗಿದಿಲ್ಲ. ಹೀಗಾಗಿ ನಾಳೆಯೂ ಎಂಜಿ ರಸ್ತೆ ಹಾಗೂ ಇಂದಿರಾನಗರ ನಡುವೆ ಮೆಟ್ರೋ ರೈಲು ಸಂಚರಿಸುವುದಿಲ್ಲ. ಈ ಮಾರ್ಗದಲ್ಲಿ ಮಂಗಳವಾರ ಮೆಟ್ರೋ ಸಂಚಾರ ಪುನಾರಂಭವಾಗಲಿದೆ ಎಂದು ಬಿಎಂಆರ್ ಸಿಎಲ್ ಭಾನುವಾರ ತಿಳಿಸಿದೆ.
ಜನವರಿ 1 ಅಂದರೆ ಹೊಸ ವರ್ಷದಿಂದ ಎಂಜಿ ರಸ್ತೆ- ಇಂದಿರಾನಗರ ಮೆಟ್ರೋ ಸಂಚಾರ ಆರಂಭವಾಗಲಿದೆ. ಉಳಿದಂತೆ ಮೈಸೂರು ರಸ್ತೆಯಿಂದ ಎಂಜಿ ರಸ್ತೆವರೆಗೆ ಮತ್ತು ಇಂದಿರಾನಗರದಿಂದ ಬೈಯಪ್ಪನಹಳ್ಳಿಯವರೆಗೆ ಮೆಟ್ರೋ ರೈಲು ಸಂಚಾರ ಎಂದಿನಂತೆ ಇರಲಿದ್ದು, ಉಳಿದ ಹಸಿರು ಬಣ್ಣದ ಮಾರ್ಗದ ಸಂಚಾರದಲ್ಲಿ ಯಾವುದೇ ಬದಲಾವಣೆಯಿರುವುದಿಲ್ಲ ಎಂದು ಬಿಎಂಆರ್ ಸಿಎಲ್ ಹೇಳಿದೆ.
ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಸೋಮವಾರ 
ರಾತ್ರಿ 11 ರಿಂದ 2 ಗಂಟೆಯವರೆಗೆ ಮೆಟ್ರೋ ರೈಲು ಸಂಚರಿಸಲಿದ್ದು, ಕಬ್ಬನ್​ ಪಾರ್ಕ್​ನಿಂದ ಬೈಯ್ಯಪ್ಪನಹಳ್ಳಿವರೆಗೆ ಬಸ್​ಗಳು ಸಂಚರಿಸಲಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT