ಅನಂತಪುರ ಈಶ್ವರಯ್ಯ 
ರಾಜ್ಯ

ಹಿರಿಯ ಕಲಾ ವಿಮರ್ಷಕ ಅನಂತಪುರ ಈಶ್ವರಯ್ಯ ವಿಧಿವಶ

ಕಲಾವಿಹಾರಿ, ಕಲಾ ಚಿಂತಕರಾಗಿದ್ದ ವಿಮರ್ಷಕ ಅನಂತಪುರ ಈಶ್ವರಯ್ಯ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು.

ಉಡುಪಿ: ಕಲಾವಿಹಾರಿ, ಕಲಾ ಚಿಂತಕರಾಗಿದ್ದ ವಿಮರ್ಷಕ ಅನಂತಪುರ ಈಶ್ವರಯ್ಯ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು.
ಕುಂಬಳೆ‌ ಅನಂತಪುರದ ಈಶ್ವರಯ್ಯ ಹಲವು ರೀತಿಯ ಲಲಿತ ಕಲೆಯ ಕಲಾವಿದರುಗಳಿಗೆ,ಕಲಾಸ್ವಾದಕರಿಗೆ, ಕಲಾ ಚಿಂತಕರಿಗೆ ಪತ್ರಕರ್ತರಿಗೆ, ಛಾಯಾಗ್ರಾಹಕರಿಗೆ, ಸಾಹಿತ್ಯಾಸಕ್ತರಿಗೆ ಹೀಗೆ ಹಲವು ಕ್ಷೇತ್ರದ ಜನರಿಗೆ ಚಿರಪರಿಚಿತವಾಗಿದ್ದ ಹೆಸರು. ಕನ್ನಡದ ಪ್ರಸಿದ್ದ ಮಾಸ ಪತ್ರಿಕೆ ತುಷಾರ, ಉದಯವಾಣಿ ಸಾಪ್ತಾಹಿಕ ಪುರವಣಿ ಮಾಜಿ ಸಂಪಾದಕರಾಗಿದ್ದ ಇವರು ಉಡುಪಿ ಎಂಜಿಎಂ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಪತ್ರಕರ್ತರಾಗಿ ಉದಯವಾಣಿ ಗೆ ಸೇರಿದ್ದರು.
ಕಲೆ, ಸಂಸ್ಕೃತಿಯ ವಿಮರ್ಶೆಗಳಿಗೆ ಹೆಸರಾಗಿದ್ದ ಇವರು ಹಲವು ಕಲಾವಿದರ ಬೆಳವಣಿಗೆಗೆ ಸಹಕಾರ ನೀಡಿದರು.ಫೋಟೋಗ್ರಫಿ ತರಬೇತಿಯನ್ನೂ ನೀಡಿತಿದ್ದ ಇವರು ನಿವೃತ್ತಿ ನಂತರ ಸಹ ಕಲಾ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.
ಸಂಗೀತದಲ್ಲಿ, ಯಕ್ಷಗಾನದಲ್ಲಿ, ಸಾಹಿತ್ಯದಲ್ಲಿ, ಛಾಯಾಗ್ರಹಣದಲ್ಲಿ ಹೀಗೆ ಹಲವು ಕ್ಷೇತ್ರಗಳಲ್ಲಿ ತನ್ನ ಅಭಿರುಚಿಯನ್ನು ಬೆಳೆಸಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಭಾರತ ಹೆಚ್ಚಿನ ಸುಂಕ ವಿಧಿಸಬೇಕು: ಕೇಜ್ರಿವಾಲ್

SCROLL FOR NEXT