ರಾಜ್ಯ

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ದಿನೇಶ್ ಮಹೇಶ್ವರಿ ಹೆಸರು ಸೂಚನೆ

Sumana Upadhyaya
ಬೆಂಗಳೂರು: ಮೇಘಾಲಯ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರನ್ನು ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್ ನ ಮಂಡಳಿ ಶಿಫಾರಸು ಮಾಡಿದೆ.
ಕಳೆದ ಜನವರಿ 10ರಂದು ಮಂಡಳಿಯ ಕಲಾಪದಲ್ಲಿ ನಡೆದ ಚರ್ಚಾವಿಷಯಗಳು ಸುಪ್ರೀಂ ಕೋರ್ಟ್ ನ ವೆಬ್ ಸೈಟ್ ನಲ್ಲಿ ಪ್ರಕಟವಾಗಿದ್ದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರನ್ನು ಕರ್ನಾಟಕ ಹೈಕೋರ್ಟ್  ಮುಖ್ಯ ನ್ಯಾಯಾಧೀಶರಾಗಿ ವರ್ಗಾಯಿಸುವಂತೆ ಶಿಫಾರಸು ಮಾಡಿದ್ದಾರೆ.
ಅಖಿಲ ಭಾರತ ಮಟ್ಟದಲ್ಲಿ ಹೈಕೋರ್ಟ್ ನ್ಯಾಯಾಧೀಶರ ಹಿರಿತನದ ಪ್ರಕಾರ, ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ ಮತ್ತೊಬ್ಬ ನ್ಯಾಯಮೂರ್ತಿ ಹೆಚ್.ಜಿ.ರಮೇಶ್ ಅವರಿಂದ ಕೆಳಗೆ ನಿಲ್ಲುತ್ತಾರೆ. ಆದರೆ ನ್ಯಾಯಮೂರ್ತಿ ರಮೇಶ್ ಅವರು ಕರ್ನಾಟಕ ಮುಖ್ಯ ನ್ಯಾಯಮೂರ್ತಿ ಹುದ್ದೆಯನ್ನು ಈ ಹಿಂದೆ ನಿರಾಕರಿಸಿದ್ದರು.
ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಅವರ ನಿವೃತ್ತಿಯ ನಂತರ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆ ಖಾಲಿ ಉಳಿದಿದೆ. 
SCROLL FOR NEXT