ನವಲಗುಂದ ಶಾಸಕ ಎನ್.ಎಚ್.ಕೊನರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು 
ರಾಜ್ಯ

ಕಳಸಾ-ಬಂಡೂರಿ: ಕರ್ನಾಟಕ-ಗೋವಾ ರಸ್ತೆ ತಡೆ ಮಾಡಿ ರೈತರ ಪ್ರತಿಭಟನೆ

ಜೆಡಿಎಸ್ ಶಾಸಕ ಹೆಚ್.ಕೊಣರೆಡ್ಡಿ ನೇತೃತ್ವದಲ್ಲಿ ರೈತರು ನಿನ್ನೆ ಕಣಕುಂಬಿ ಹತ್ತಿರ ಬೆಳಗಾವಿ-ಗೋವಾ ರಸ್ತೆಯನ್ನು...

ಕನಕುಂಬಿ (ಬೆಳಗಾವಿ): ಜೆಡಿಎಸ್ ಶಾಸಕ ಹೆಚ್. ಕೊಣರೆಡ್ಡಿ ನೇತೃತ್ವದಲ್ಲಿ ರೈತರು ನಿನ್ನೆ ಕಣಕುಂಬಿ ಹತ್ತಿರ ಬೆಳಗಾವಿ-ಗೋವಾ ರಸ್ತೆಯನ್ನು ಒಂದು ಗಂಟೆಗೂ ಅಧಿಕ ಕಾಲ ತಡೆನಡೆಸಿದರು. 
ಇದರಿಂದ ಆ ಮಾರ್ಗದಲ್ಲಿ ಒಂದು ಗಂಟೆಗೂ ಅಧಿಕ ಕಾಲ ವಾಹನ ಸಂಚಾರ ದಟ್ಟಣೆಯುಂಟಾಯಿತು. ನವಲಗುಂದ, ನರಗುಂದ, ಹುಬ್ಬಳ್ಳಿ, ಧಾರವಾಡ ಮತ್ತು ಬೆಳಗಾವಿಯ 300ಕ್ಕೂ ಅಧಿಕ ರೈತರು ಮೊನ್ನೆ ಬುಧವಾರ ರಾತ್ರಿ ಬಂದು ಕಣಕುಂಬಿ ಹತ್ತಿರ ಮೌಲಿ ದೇವಸ್ಥಾನದಲ್ಲಿ ರಾತ್ರಿ ಕಳೆದು ಮರುದಿನ ಬೆಳಗಾವಿ-ಗೋವಾ ಮಾರ್ಗದಲ್ಲಿ ರಸ್ತೆ ತಡೆ ನಡೆಸಿದರು. ಕಳಸಾ-ಬಂಡೂರಿ ನಾಲಾ ಯೋಜನೆ ಜಾರಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ವಿಫಲವಾಗಿವೆ ಎಂದು ಆರೋಪಿಸಿ ಘೋಷಣೆ ಕೂಗಿದರು.
ಕಳಸಾ-ಬಂಡೂರಿ ನಾಲೆ ಯೋಜನೆ ಜಾರಿಗೆ ಹೋರಾಡುತ್ತಿರುವವರಲ್ಲಿ ಮುಂಚೂಣಿಯಲ್ಲಿರುವ ಕೊಣರೆಡ್ಡಿ, ಕಣಕುಂಬಿಗೆ ಭೇಟಿ ನೀಡಿದ ಗೋವಾ ಸರ್ಕಾರದ ಜಲಸಂಪನ್ಮೂಲ ಸಚಿವ ವಿನೋದ್ ಪಾಳೇಕರ್ ಮತ್ತು ಸ್ಪೀಕರ್ ಪ್ರಮೋದ್ ಸಾವಂತ್ ಅವರ ಸುಳ್ಳು ಮತ್ತು ಮೋಸವನ್ನು ಬಹಿರಂಗಪಡಿಸಲು ತಾವು ಗ್ರಾಮ ವಾಸ್ತವ್ಯ ಹೂಡಿರುವುದಾಗಿ ತಿಳಿಸಿದರು.
ಗೋವಾ ಸರ್ಕಾರದ ಸುಳ್ಳುಗಳನ್ನು ಬಹಿರಂಗಪಡಿಸಲು ನಾವಿಲ್ಲಿಗೆ ಬಂದಿದ್ದೇವೆ. ನಾವು ಸ್ಥಳವನ್ನು ಪರಿಶೀಲಿಸಿದ್ದು ಕರ್ನಾಟಕ ಸರ್ಕಾರ ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ. ನಾಲೆ ಕಾಮಗಾರಿ ಸಂಪೂರ್ಣ ಸ್ಥಗಿತಗೊಂಡಿದೆ ಎಂದು ಕೊಣರೆಡ್ಡಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?