ನವಲಗುಂದ ಶಾಸಕ ಎನ್.ಎಚ್.ಕೊನರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು 
ರಾಜ್ಯ

ಕಳಸಾ-ಬಂಡೂರಿ: ಕರ್ನಾಟಕ-ಗೋವಾ ರಸ್ತೆ ತಡೆ ಮಾಡಿ ರೈತರ ಪ್ರತಿಭಟನೆ

ಜೆಡಿಎಸ್ ಶಾಸಕ ಹೆಚ್.ಕೊಣರೆಡ್ಡಿ ನೇತೃತ್ವದಲ್ಲಿ ರೈತರು ನಿನ್ನೆ ಕಣಕುಂಬಿ ಹತ್ತಿರ ಬೆಳಗಾವಿ-ಗೋವಾ ರಸ್ತೆಯನ್ನು...

ಕನಕುಂಬಿ (ಬೆಳಗಾವಿ): ಜೆಡಿಎಸ್ ಶಾಸಕ ಹೆಚ್. ಕೊಣರೆಡ್ಡಿ ನೇತೃತ್ವದಲ್ಲಿ ರೈತರು ನಿನ್ನೆ ಕಣಕುಂಬಿ ಹತ್ತಿರ ಬೆಳಗಾವಿ-ಗೋವಾ ರಸ್ತೆಯನ್ನು ಒಂದು ಗಂಟೆಗೂ ಅಧಿಕ ಕಾಲ ತಡೆನಡೆಸಿದರು. 
ಇದರಿಂದ ಆ ಮಾರ್ಗದಲ್ಲಿ ಒಂದು ಗಂಟೆಗೂ ಅಧಿಕ ಕಾಲ ವಾಹನ ಸಂಚಾರ ದಟ್ಟಣೆಯುಂಟಾಯಿತು. ನವಲಗುಂದ, ನರಗುಂದ, ಹುಬ್ಬಳ್ಳಿ, ಧಾರವಾಡ ಮತ್ತು ಬೆಳಗಾವಿಯ 300ಕ್ಕೂ ಅಧಿಕ ರೈತರು ಮೊನ್ನೆ ಬುಧವಾರ ರಾತ್ರಿ ಬಂದು ಕಣಕುಂಬಿ ಹತ್ತಿರ ಮೌಲಿ ದೇವಸ್ಥಾನದಲ್ಲಿ ರಾತ್ರಿ ಕಳೆದು ಮರುದಿನ ಬೆಳಗಾವಿ-ಗೋವಾ ಮಾರ್ಗದಲ್ಲಿ ರಸ್ತೆ ತಡೆ ನಡೆಸಿದರು. ಕಳಸಾ-ಬಂಡೂರಿ ನಾಲಾ ಯೋಜನೆ ಜಾರಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ವಿಫಲವಾಗಿವೆ ಎಂದು ಆರೋಪಿಸಿ ಘೋಷಣೆ ಕೂಗಿದರು.
ಕಳಸಾ-ಬಂಡೂರಿ ನಾಲೆ ಯೋಜನೆ ಜಾರಿಗೆ ಹೋರಾಡುತ್ತಿರುವವರಲ್ಲಿ ಮುಂಚೂಣಿಯಲ್ಲಿರುವ ಕೊಣರೆಡ್ಡಿ, ಕಣಕುಂಬಿಗೆ ಭೇಟಿ ನೀಡಿದ ಗೋವಾ ಸರ್ಕಾರದ ಜಲಸಂಪನ್ಮೂಲ ಸಚಿವ ವಿನೋದ್ ಪಾಳೇಕರ್ ಮತ್ತು ಸ್ಪೀಕರ್ ಪ್ರಮೋದ್ ಸಾವಂತ್ ಅವರ ಸುಳ್ಳು ಮತ್ತು ಮೋಸವನ್ನು ಬಹಿರಂಗಪಡಿಸಲು ತಾವು ಗ್ರಾಮ ವಾಸ್ತವ್ಯ ಹೂಡಿರುವುದಾಗಿ ತಿಳಿಸಿದರು.
ಗೋವಾ ಸರ್ಕಾರದ ಸುಳ್ಳುಗಳನ್ನು ಬಹಿರಂಗಪಡಿಸಲು ನಾವಿಲ್ಲಿಗೆ ಬಂದಿದ್ದೇವೆ. ನಾವು ಸ್ಥಳವನ್ನು ಪರಿಶೀಲಿಸಿದ್ದು ಕರ್ನಾಟಕ ಸರ್ಕಾರ ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ. ನಾಲೆ ಕಾಮಗಾರಿ ಸಂಪೂರ್ಣ ಸ್ಥಗಿತಗೊಂಡಿದೆ ಎಂದು ಕೊಣರೆಡ್ಡಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT