ನವಲಗುಂದ ಶಾಸಕ ಎನ್.ಎಚ್.ಕೊನರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು 
ರಾಜ್ಯ

ಕಳಸಾ-ಬಂಡೂರಿ: ಕರ್ನಾಟಕ-ಗೋವಾ ರಸ್ತೆ ತಡೆ ಮಾಡಿ ರೈತರ ಪ್ರತಿಭಟನೆ

ಜೆಡಿಎಸ್ ಶಾಸಕ ಹೆಚ್.ಕೊಣರೆಡ್ಡಿ ನೇತೃತ್ವದಲ್ಲಿ ರೈತರು ನಿನ್ನೆ ಕಣಕುಂಬಿ ಹತ್ತಿರ ಬೆಳಗಾವಿ-ಗೋವಾ ರಸ್ತೆಯನ್ನು...

ಕನಕುಂಬಿ (ಬೆಳಗಾವಿ): ಜೆಡಿಎಸ್ ಶಾಸಕ ಹೆಚ್. ಕೊಣರೆಡ್ಡಿ ನೇತೃತ್ವದಲ್ಲಿ ರೈತರು ನಿನ್ನೆ ಕಣಕುಂಬಿ ಹತ್ತಿರ ಬೆಳಗಾವಿ-ಗೋವಾ ರಸ್ತೆಯನ್ನು ಒಂದು ಗಂಟೆಗೂ ಅಧಿಕ ಕಾಲ ತಡೆನಡೆಸಿದರು. 
ಇದರಿಂದ ಆ ಮಾರ್ಗದಲ್ಲಿ ಒಂದು ಗಂಟೆಗೂ ಅಧಿಕ ಕಾಲ ವಾಹನ ಸಂಚಾರ ದಟ್ಟಣೆಯುಂಟಾಯಿತು. ನವಲಗುಂದ, ನರಗುಂದ, ಹುಬ್ಬಳ್ಳಿ, ಧಾರವಾಡ ಮತ್ತು ಬೆಳಗಾವಿಯ 300ಕ್ಕೂ ಅಧಿಕ ರೈತರು ಮೊನ್ನೆ ಬುಧವಾರ ರಾತ್ರಿ ಬಂದು ಕಣಕುಂಬಿ ಹತ್ತಿರ ಮೌಲಿ ದೇವಸ್ಥಾನದಲ್ಲಿ ರಾತ್ರಿ ಕಳೆದು ಮರುದಿನ ಬೆಳಗಾವಿ-ಗೋವಾ ಮಾರ್ಗದಲ್ಲಿ ರಸ್ತೆ ತಡೆ ನಡೆಸಿದರು. ಕಳಸಾ-ಬಂಡೂರಿ ನಾಲಾ ಯೋಜನೆ ಜಾರಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ವಿಫಲವಾಗಿವೆ ಎಂದು ಆರೋಪಿಸಿ ಘೋಷಣೆ ಕೂಗಿದರು.
ಕಳಸಾ-ಬಂಡೂರಿ ನಾಲೆ ಯೋಜನೆ ಜಾರಿಗೆ ಹೋರಾಡುತ್ತಿರುವವರಲ್ಲಿ ಮುಂಚೂಣಿಯಲ್ಲಿರುವ ಕೊಣರೆಡ್ಡಿ, ಕಣಕುಂಬಿಗೆ ಭೇಟಿ ನೀಡಿದ ಗೋವಾ ಸರ್ಕಾರದ ಜಲಸಂಪನ್ಮೂಲ ಸಚಿವ ವಿನೋದ್ ಪಾಳೇಕರ್ ಮತ್ತು ಸ್ಪೀಕರ್ ಪ್ರಮೋದ್ ಸಾವಂತ್ ಅವರ ಸುಳ್ಳು ಮತ್ತು ಮೋಸವನ್ನು ಬಹಿರಂಗಪಡಿಸಲು ತಾವು ಗ್ರಾಮ ವಾಸ್ತವ್ಯ ಹೂಡಿರುವುದಾಗಿ ತಿಳಿಸಿದರು.
ಗೋವಾ ಸರ್ಕಾರದ ಸುಳ್ಳುಗಳನ್ನು ಬಹಿರಂಗಪಡಿಸಲು ನಾವಿಲ್ಲಿಗೆ ಬಂದಿದ್ದೇವೆ. ನಾವು ಸ್ಥಳವನ್ನು ಪರಿಶೀಲಿಸಿದ್ದು ಕರ್ನಾಟಕ ಸರ್ಕಾರ ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ. ನಾಲೆ ಕಾಮಗಾರಿ ಸಂಪೂರ್ಣ ಸ್ಥಗಿತಗೊಂಡಿದೆ ಎಂದು ಕೊಣರೆಡ್ಡಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT