ಬೆಳ್ಳಂದೂರು ಕೆರೆಯಲ್ಲಿ ನಿನ್ನೆ ಕಾಣಿಸಿಕೊಂಡ ಹಳದಿ ಮಿಶ್ರಿತ ಬೆಂಕಿ 
ರಾಜ್ಯ

ಬೆಳ್ಳಂದೂರು ಕೆರೆಯಲ್ಲಿ ಮತ್ತೆ ಎರಡು ಬಾರಿ ಕಾಣಿಸಿಕೊಂಡ ಬೆಂಕಿ

ಬೆಳ್ಳಂದೂರು ಕೆರೆಯಲ್ಲಿ ನಿನ್ನೆ ಸಾಯಂಕಾಲ ಎರಡು ಕಡೆ ಬೆಂಕಿ ....

ಬೆಂಗಳೂರು: ಬೆಳ್ಳಂದೂರು ಕೆರೆಯಲ್ಲಿ ನಿನ್ನೆ ಸಾಯಂಕಾಲ ಎರಡು ಕಡೆ ಬೆಂಕಿ ಕಾಣಿಸಿಕೊಂಡಿದೆ. ಸೇನೆ ಮತ್ತು ಅಗ್ನಿ ಶಾಮಕ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿದ ನಂತರ ಕಳೆದ ಸಾಯಂಕಾಲ ಬೆಂಕಿ ಕಾಣಿಸಿಕೊಂಡಿತು. ರಾಷ್ಟ್ರೀಯ ಹಸಿರು ಪ್ರಾಧಿಕಾರ ಈ ಹಿಂದೆ ಬೆಂಕಿ ಕಾಣಿಸಿಕೊಂಡಾಗ ಉಂಟಾದ ದುರ್ಘಟನೆಯನ್ನು ಪರಾಮರ್ಶಿಸಿ ಕೆರೆಯ ಸುತ್ತಮುತ್ತ ಇರುವ 99 ಅಪಾರ್ಟ್ ಮೆಂಟ್ ಗಳಲ್ಲಿ ಚರಂಡಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸುವಂತೆ ಆದೇಶ ನೀಡಿದ ಮೂರು ದಿನಗಳ ನಂತರ ಈ ದುರ್ಘಟನೆ ಸಂಭವಿಸಿದೆ.
ಕೆರೆಯ ಬಳಿ ಇರುವ ಅಪಾರ್ಟ್ ಮೆಂಟ್ ನಿವಾಸಿ ಸೊನಾಲಿ ಸಿಂಗ್, ಹಳದಿ ಬಿಳಿ ಬಣ್ಣದ ಹೊಗೆ ನಿನ್ನೆ ಸಾಯಂಕಾಲ 3.30ರ ಸುಮಾರಿಗೆ ಕಾಣಿಸಿಕೊಂಡಿತು. ಈ ಹಿಂದೆ ಬೆಂಕಿ ಕಾಣಿಸಿಕೊಂಡ ಸ್ಥಳದಲ್ಲಿಯೇ ನಿನ್ನೆ ಕೂಡ ಬೆಂಕಿ ಕಾಣಿಸಿಕೊಂಡಿತು. ಸುಮಾರು ಅರ್ಧ ಗಂಟೆ ಕಾಲ ಬೆಂಕಿ ಹತ್ತಿ ಉರಿಯಿತು. ನಂತರ ಸಾಯಂಕಾಲ 5.30ರ ಹೊತ್ತಿಗೆ ಬೆಂಕಿ ಮತ್ತೆ ಕಾಣಿಸಿಕೊಂಡಿತು. ಬೆಂಕಿಯ ಧಗೆ ಚೆನ್ನಾಗಿ ಕಂಡಿದೆ ಎಂದು ವಿವರಿಸುತ್ತಾರೆ.
ಮೂವರು ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಸಂಜೆ 7 ಗಂಟೆ ಹೊತ್ತಿಗೆ ಬೆಂಕಿಯನ್ನು ಆರಿಸಿತು ಎಂದು ಸೊನಾಲಿ ಸಿಂಗ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬ್ರಿಟಿಷರ ದಬ್ಬಾಳಿಕೆ ನಡುವೆಯೂ 'ವಂದೇ ಮಾತರಂ' ಬಂಡೆಯಂತೆ ಗಟ್ಟಿಯಾಗಿ ನಿಂತಿತು: ಲೋಕಸಭೆಯಲ್ಲಿ ಪ್ರಧಾನಿ ಮೋದಿ

ಮಲಯಾಳಂ ನಟಿ ಮೇಲೆ ಅತ್ಯಾಚಾರ ಪ್ರಕರಣ: ನಟ ದಿಲೀಪ್ ಖುಲಾಸೆ; ಪಲ್ಸರ್ ಸುನಿ ಸೇರಿ ಆರು ಮಂದಿ ತಪ್ಪಿತಸ್ಥರು

ಬಾಬ್ರಿ ಮಾದರಿಯ ಬಂಗಾಳದ ಮಸೀದಿಗೆ ಎರಡೇ ದಿನದಲ್ಲಿ 1.3 ಕೋಟಿ ರೂ. ದೇಣಿಗೆ!

ಬೆಳಗಾವಿಯಲ್ಲಿ ಎಂಇಎಸ್, ಕೊಲ್ಹಾಪುರದಲ್ಲಿ ಶಿವಸೇನೆ ಪುಂಡಾಟಿಕೆ; ಮಹಾರಾಷ್ಟ್ರಕ್ಕೆ KSRTC ಬಸ್ ಸಂಚಾರ ಬಂದ್!

ತಾಪಮಾನದಲ್ಲಿ ಮತ್ತಷ್ಟು ಕುಸಿತ: ಬೆಂಗಳೂರಿನಲ್ಲಿ ಚಳಿ ಪ್ರಮಾಣ ಹೆಚ್ಚಳ, ವಾಯು ಗುಣಮಟ್ಟದಲ್ಲೂ ಬದಲಾವಣೆ

SCROLL FOR NEXT