ಬೆಳ್ಳಂದೂರು ಕೆರೆಯಲ್ಲಿ ನಿನ್ನೆ ಕಾಣಿಸಿಕೊಂಡ ಹಳದಿ ಮಿಶ್ರಿತ ಬೆಂಕಿ 
ರಾಜ್ಯ

ಬೆಳ್ಳಂದೂರು ಕೆರೆಯಲ್ಲಿ ಮತ್ತೆ ಎರಡು ಬಾರಿ ಕಾಣಿಸಿಕೊಂಡ ಬೆಂಕಿ

ಬೆಳ್ಳಂದೂರು ಕೆರೆಯಲ್ಲಿ ನಿನ್ನೆ ಸಾಯಂಕಾಲ ಎರಡು ಕಡೆ ಬೆಂಕಿ ....

ಬೆಂಗಳೂರು: ಬೆಳ್ಳಂದೂರು ಕೆರೆಯಲ್ಲಿ ನಿನ್ನೆ ಸಾಯಂಕಾಲ ಎರಡು ಕಡೆ ಬೆಂಕಿ ಕಾಣಿಸಿಕೊಂಡಿದೆ. ಸೇನೆ ಮತ್ತು ಅಗ್ನಿ ಶಾಮಕ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿದ ನಂತರ ಕಳೆದ ಸಾಯಂಕಾಲ ಬೆಂಕಿ ಕಾಣಿಸಿಕೊಂಡಿತು. ರಾಷ್ಟ್ರೀಯ ಹಸಿರು ಪ್ರಾಧಿಕಾರ ಈ ಹಿಂದೆ ಬೆಂಕಿ ಕಾಣಿಸಿಕೊಂಡಾಗ ಉಂಟಾದ ದುರ್ಘಟನೆಯನ್ನು ಪರಾಮರ್ಶಿಸಿ ಕೆರೆಯ ಸುತ್ತಮುತ್ತ ಇರುವ 99 ಅಪಾರ್ಟ್ ಮೆಂಟ್ ಗಳಲ್ಲಿ ಚರಂಡಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸುವಂತೆ ಆದೇಶ ನೀಡಿದ ಮೂರು ದಿನಗಳ ನಂತರ ಈ ದುರ್ಘಟನೆ ಸಂಭವಿಸಿದೆ.
ಕೆರೆಯ ಬಳಿ ಇರುವ ಅಪಾರ್ಟ್ ಮೆಂಟ್ ನಿವಾಸಿ ಸೊನಾಲಿ ಸಿಂಗ್, ಹಳದಿ ಬಿಳಿ ಬಣ್ಣದ ಹೊಗೆ ನಿನ್ನೆ ಸಾಯಂಕಾಲ 3.30ರ ಸುಮಾರಿಗೆ ಕಾಣಿಸಿಕೊಂಡಿತು. ಈ ಹಿಂದೆ ಬೆಂಕಿ ಕಾಣಿಸಿಕೊಂಡ ಸ್ಥಳದಲ್ಲಿಯೇ ನಿನ್ನೆ ಕೂಡ ಬೆಂಕಿ ಕಾಣಿಸಿಕೊಂಡಿತು. ಸುಮಾರು ಅರ್ಧ ಗಂಟೆ ಕಾಲ ಬೆಂಕಿ ಹತ್ತಿ ಉರಿಯಿತು. ನಂತರ ಸಾಯಂಕಾಲ 5.30ರ ಹೊತ್ತಿಗೆ ಬೆಂಕಿ ಮತ್ತೆ ಕಾಣಿಸಿಕೊಂಡಿತು. ಬೆಂಕಿಯ ಧಗೆ ಚೆನ್ನಾಗಿ ಕಂಡಿದೆ ಎಂದು ವಿವರಿಸುತ್ತಾರೆ.
ಮೂವರು ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಸಂಜೆ 7 ಗಂಟೆ ಹೊತ್ತಿಗೆ ಬೆಂಕಿಯನ್ನು ಆರಿಸಿತು ಎಂದು ಸೊನಾಲಿ ಸಿಂಗ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT