ಸಿಎಂ ಸಿದ್ದರಾಮಯ್ಯ 
ರಾಜ್ಯ

ಸದಾಶಿವ ಆಯೋಗದ ವರದಿ ಕುರಿತು ಸಿಎಂ ಸಭೆ, ಅರ್ಧಕ್ಕೆ ಹೊರ ನಡೆದ ದಲಿತ ಮುಖಂಡರು

ಬಜೆಟ್ ನಲ್ಲಿ ಪರಿಶಿಷ್ಟ ಜಾತಿಗೆ ಕಲ್ಪಿಸಬೇಕಾದ ಅನುಕೂಲತೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ದಲಿತ ಮುಖಂಡರೊಂದಿಗೆ....

ಬೆಂಗಳೂರು: ಬಜೆಟ್ ನಲ್ಲಿ ಪರಿಶಿಷ್ಟ ಜಾತಿಗೆ ಕಲ್ಪಿಸಬೇಕಾದ ಅನುಕೂಲತೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ದಲಿತ ಮುಖಂಡರೊಂದಿಗೆ ಬಜೆಟ್ ಪೂರ್ವಭಾವಿ ಸಭೆ ಕರೆದಿದ್ದರು. ಈ ವೇಳೆ ಪರಿಶಿಷ್ಟರಿಗೆ ಒಳಮೀಸಲಾತಿ ಕಲ್ಪಿಸುವ ಸದಾಶಿವ ಆಯೋಗದ ವರದಿ ವಿಚಾರ ಪ್ರಸ್ತಾಪವಾಗಿ ವಾದ -ವಿವಾದಗಳು ನಡೆದು ದಲಿತ ಮುಖಂಡರುಗಳು ಸಭೆಯಿಂದ ಹೊರ ನಡೆದ ಪ್ರಸಂಗ ನಡೆಯಿತು.
ಪರಿಶಿಷ್ಟ ಜಾತಿಯ ವಿವಿಧ ಕಲ್ಯಾಣ ಯೋಜನೆಗಳಿಗೆ ಹಣ ಹಂಚಿಕೆ ಮಾಡುವ ಕುರಿತು ಸಿಎಂ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಭೆ ಕರೆದಿದ್ದರು. ಸಭೆಯಲ್ಲಿ ಸದಾಶಿವ ಆಯೋಗದ ವರದಿ ಜಾರಿಗೊಳಿಸುವ ಬಗ್ಗೆ ಸರ್ಕಾರದ ನಿಲುವು ಸ್ಪಷ್ಟಪಡಿಸಬೇಕು ಎಂದು ದಲಿತ ಮುಖಂಡರು ಪಟ್ಟು ಹಿಡಿದರು. ಇದರಿಂದ ಆಕ್ರೋಶಗೊಂಡ ಸಿದ್ದರಾಮಯ್ಯ, ಅದೆಲ್ಲ ಆಮೇಲೆ ಮೊದಲು ಬಜೆಟ್‌ಗೆ ಸಂಬಂಧಿಸಿದ ಚರ್ಚೆಯಾಗಲಿ ಎಂದಿದ್ದಾರೆ. ನೀವು ಹೀಗೆ ಹೇಳುವುದಾದರೆ ನಾವು ಸಭೆಯಿಂದ ಹೊರ ಹೋಗುತ್ತೇವೆ ಎಂದು ದಲಿತ ಮುಖಂಡರು ಸಭೆಯಿಂದ ಹೊರ ನಡೆದರು.
ಸಭೆ ಆರಂಭವಾಗುತ್ತಿದ್ದಂತೆ ಬಹುಜನ ಸಮಾಜ ಪಕ್ಷದ ರಾಜ್ಯ ಸಂಚಾಲಕ ಮಾರಸಂದ್ರ ಮುನಿಯಪ್ಪ ಮತ್ತು ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಎನ್ ಮೂರ್ತಿ ಅವರು ಸದಾಶಿವ ಆಯೋಗದ ವರದಿ ಜಾರಿ ಕುರಿತು ರಾಜ್ಯ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸದಾಶಿವ ಆಯೋಗದ ವರದಿಯನ್ವು ಜಾರಿಗೆ ತರಲು ಇಷ್ಟವಿಲ್ಲ. ಲಿಂಗಾಯತ, ವೀರಶೈವ ಜಾತಿಗಳನ್ನು ಒಡೆದಂತೆ ದಲಿತ ಜಾತಿಗಳನ್ನು ಒಡೆದು ಅವರು ಕಚ್ಛಾಡುವಂತೆ ಮಾಡುವ ಯತ್ನ ನಡೆಸಿದ್ದಾರೆ ಎಂದು ಮೂರ್ತಿ ಆರೋಪಿಸಿದರು. ಅಲ್ಲದೆ ಸಿಎಂ ಸಿದ್ದರಾಮಯ್ಯ ಅವರು ದಲಿತ ಸಹಯಾದಿಂದ ಅಧಿಕಾರಕ್ಕೆ ಬಂದು ಈಗ ಅವರ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ತಕ್ಕ ಪಾಠ ಕಲಿಸುವುದಾಗಿ ಮೂರ್ತಿ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT