ಸಮಾಜ ಪರಿವರ್ತನಾ ಸಂಸ್ಥೆ ಮುಖ್ಯಸ್ಥ ಎಸ್.ಆರ್. ಹಿರೇಮಠ್ ಅವರ(ಸಾಂದರ್ಭಿಕ ಚಿತ್ರ) 
ರಾಜ್ಯ

ಚುನಾವಣಾ ಕಣಕ್ಕಿಳಿಯಲು ಜನಸಂಗ್ರಾಮ ಪರಿಷತ್ ಚಿಂತನೆ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಜನಸಂಗ್ರಾಮ ಪರಿಷತ್ ಚಿಂತನೆ ನಡೆಸಿದೆ ಎಂದು ಸಮಾಜ ಪರಿವರ್ತನಾ ಸಂಸ್ಥೆಯ ಮುಖ್ಯಸ್ಥ ಎಸ್. ಆರ್. ಹಿರೇಮಠ್ ಹೇಳಿದ್ದಾರೆ.

ಗದಗ್ : ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು  ಜನಸಂಗ್ರಾಮ ಪರಿಷತ್  ಚಿಂತನೆ ನಡೆಸಿದ್ದು, ಈ ಕುರಿತು ಇದೇ ತಿಂಗಳ 7 ರಂದು ಧಾರವಾಡದಲ್ಲಿ ನಡೆಯುವ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಮಾಜ ಪರಿವರ್ತನಾ ಸಂಸ್ಥೆಯ ಮುಖ್ಯಸ್ಥ ಎಸ್. ಆರ್. ಹಿರೇಮಠ್ ಹೇಳಿದ್ದಾರೆ.

ಫೆ.24ರಿಂದ ಮಾರ್ಚ್ 2ರವರೆಗೆ  ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮತದಾರರ ಜಾಗೃತಿ ಜಾಥಾ ಹಾಗೂ ಸಮಾವೇಶ ನಡೆಯಲಿದೆ. ರೈತರ ಸಮಸ್ಯೆ, ಭ್ರಷ್ಟಾಚಾರ, ನಿರುದ್ಯೋಗ, ಆರೋಗ್ಯ ಮತ್ತು ಶಿಕ್ಷಣದ ಖಾಸಗೀಕರಣ ಈ ನಾಲ್ಕು ಸಮಸ್ಯೆಗಳ ಕುರಿತು ಜಾಥಾದಲ್ಲಿ ಗಮನ ಸೆಳೆಯಲಾಗುವುದು ಹಾಗೂ  ಮೂರು ಪ್ರಮುಖ ರಾಜಕೀಯ ಪಕ್ಷಗಳನ್ನು ತಿರಸ್ಕರಿಸುವಂತೆ ಮತದಾರರಲ್ಲಿ ಮನವಿ ಮಾಡಲಾಗುವುದು ಎಂದರು.

‘ಫೆ.24ರಂದು ಕೂಡಲಸಂಗಮದಿಂದ ಜಾಥಾ ಪ್ರಾರಂಭಗೊಳ್ಳಲಿದ್ದು, ಫೆ. 25ರಂದು ನವಲಗುಂದದಲ್ಲಿ, ಫೆ.27ರಂದು ಗದುಗಿನಲ್ಲಿ ಸಮಾವೇಶ ನಡೆಯಲಿದೆ. ಗದುಗಿನ ಸಮಾವೇಶದಲ್ಲಿ ತೋಂಟದ ಶ್ರೀಗಳು ಸಾನ್ನಿಧ್ಯ ವಹಿಸುವರು. ನಿವೃತ್ತ ಲೋಕಾಯುಕ್ತ ಸಂತೋಷ ಹೆಗ್ಡೆ ಭಾಗವಹಿಸುವರು. ಫೆ. 28ರಂದು ಶಿಶುನಾಳದಲ್ಲಿ ಜಾಥಾ ನಡೆಯಲಿದ್ದು, ಮಾ.2ರಂದು ಹಾವೇರಿಯಲ್ಲಿ ಕೊನೆಗೊಳ್ಳಲಿದೆ’ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT